ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ· ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ.
2ಬಿ ಅಡಿ ಮುಸ್ಲಿಮರಿಗಿದ್ದ ಶೇ.4 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು. ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ನ್ಯಾ. ಕೆ.ಎಂ. ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮೇ 9 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲಿಯವರೆಗೂ ಮೀಸಲಾತಿ ಜಾರಿಗೆ ನ್ಯಾಯಾಲಯ ತಡೆ ನೀಡಿದೆ.
ಅಫಿಡವಿಟ್ ಸಿದ್ಧವಾಗಿದೆ. ಆದರೆ ಸಾಂವಿಧಾನಿಕ ಪೀಠದ ವಿಚಾರಣೆಯಲ್ಲಿದ್ದೇನೆ. ಹೀಗಾಗಿ ವಿಚಾರಣೆ ಮುಂದೂಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದಕ್ಕೆ ಅರ್ಜಿದಾರ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಅರ್ಜಿದಾರ ಪರ ವಕೀಲರಾದ ದುಷ್ಯಂತ್ ದವೆ, ಇದು ಅತ್ಯಂತ ಮಹತ್ವದ ಪ್ರಕರಣ. ವಿಚಾರಣೆ ಮುಂದೂಡಬಾರದು ಎಂದು ಕೋರ್ಟ್ಗೆ ಮನವಿ ಮಾಡಿದ್ದರು.
ಪೀಠವು, ವಾದ ಪ್ರತಿವಾದ ಆಲಿಸಿದ ಬಳಿಕ ಮೇ 9 ಕ್ಕೆ ವಿಚಾರಣೆ ಮುಂದೂಡಿದೆ. ಅರ್ಜಿ ವಿಚಾರಣೆಗೆ ಮುಂದೂಡಿಕೆ ಆಕ್ಷೇಪ ಹಿನ್ನಲೆ ಹಳೆ ಆದೇಶ ಮುಂದುವರಿಸುವುದಾಗಿ ಕೋರ್ಟ್ ಹೇಳಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…