Advertisement
ಸುದ್ದಿಗಳು

ಹಿಜಾಬ್‌ ವಿವಾದ | ಭಿನ್ನ ತೀರ್ಪು | ರಾಜ್ಯದಲ್ಲಿ ಯಥಾ ಸ್ಥಿತಿ ಮುಂದುವರಿಕೆ |

Share

ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ಭಿನ್ನ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ.  ಮುಂದೆ ವಿಸ್ತ್ರೃತ ಪೀಠ ರಚನೆ ಮಾಡಲಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ.

Advertisement
Advertisement

ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸುಪ್ರೀಂಕೋರ್ಟ್​ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್​ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯಪಟ್ಟಿದ್ದಾರೆ.

Advertisement

ಹಿಜಾಬ್‌ ಕುರಿತು  ಇಂದು ಅಂತಿಮ ತೀರ್ಪು ಪ್ರಕಟವಾಗಬೇಕಿತ್ತು. ಸುಪ್ರೀಂ ಕೋರ್ಟ್ ನ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಮೂರ್ತಿಗಳು ಹಿಜಾಬ್ ವಿವಾದ ಕುರಿತು ಭಿನ್ನ ತೀರ್ಪುಗಳನ್ನು ನೀಡಿರುವುದರಿಂದ ನಿರ್ದಿಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.  ಈ ವಿಷಯವನ್ನು ಸೂಕ್ತ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಉಲ್ಲೇಖಿಸಲಾಗಿದೆ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತ ತಳ್ಳಿಹಾಕಿದರೆ ನ್ಯಾಯಮೂರ್ತಿ ಸುಧಾಂಶು ಧುನಿಯಾ ಮೇಲ್ಮನವಿ ಸಲ್ಲಿಕೆಯನ್ನು ಪುರಸ್ಕರಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

7 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

8 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

13 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

16 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

17 hours ago