ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ತೂಕ, ಅಳತೆ ಮತ್ತು ತೂಕದ ಸಾಧನಗಳ 2022ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ ಮೈದಾನದ ಎದರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್ನ ಮೊದಲನೇ ಮಹಡಿಯಲ್ಲಿ ಪ್ರತೀ ಗುರುವಾರ ಹಮ್ಮಿಕೊಳ್ಳಲಾಗಿದೆ.
ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೋಡಿಯಾಳ, ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ, ಅಳತೆ ಮತ್ತು ತೂಕದ ಸಾಧನಗಳನ್ನು ಪ್ರತಿ ಗುರುವಾರ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಬೇಕು ಹಾಗೂ ಶಿಬಿರವು 2022 ರ ನವೆಂಬರ್ 08 ರಂದು ಮುಕ್ತಾಯಗೊಳ್ಳಲಿದೆ ಎಂದು ಪುತ್ತೂರು ಉಪ ವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…