ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ ವಂಚನೆ | ಈ ಬಗ್ಗೆ ಎಚ್ಚರವಹಿಸುವಂತೆ ವಿಎಚ್​​ಪಿ ಎಚ್ಚರಿಕೆ |

January 1, 2024
2:54 PM

ದೇವರ ಹೆಸರಿನಲ್ಲಿ ಪಂಗನಾಮ ಹಾಕುವವರಿಗೇನು ಕಡಿಮೆ ಇಲ್ಲ. ಈಗ ಶ್ರೀರಾಮ ಮಂದಿರ ಉದ್ಘಾಟನೆ ಒಂದು ನೆಪವಾಗಿದೆ. ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ (Ram mandir) ಉದ್ಘಾಟನೆಗೆ ಇನ್ನೇನು ಕೆಲವೇ ವಾರಗಳು ಉಳಿದಿದ್ದು ದೇಗುಲ ನಿರ್ಮಾಣಕ್ಕೆ ಬೆಂಬಲ ನೀಡಲು ದೇಣಿಗೆ ಸಂಗ್ರಹಿಸುವ(Donation collection) ನೆಪದಲ್ಲಿ ಕೆಲವರು ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಗರಣ ಬಗ್ಗೆ ವಿಶ್ವ ಹಿಂದೂ ಪರಿಷತ್ (VHP) ಉತ್ತರ ಪ್ರದೇಶ ಪೊಲೀಸರಿಗೆ(Police) ದೂರು ನೀಡಿದೆ. ವಿಎಚ್‌ಪಿ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯನ್ನೂ ನೀಡಿದ್ದು, ಜನರು ಈ ವಂಚನೆಗೆ ಬಲಿಯಾಗಬೇಡಿ ಎಂದು ಜನರಿಗೆ ಹೇಳಿದೆ.

ಎಚ್ಚರಿಕೆ..!! ಕೆಲ ವ್ಯಕ್ತಿಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಸೃಷ್ಟಿಸಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ವಿಎಚ್‌ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ಈ ಸಂದರ್ಭಕ್ಕಾಗಿ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಂಬಿಕೆಯ ವಿಷಯದಲ್ಲಿ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಉತ್ತರ ಪ್ರದೇಶ ಡಿಜಿಪಿ ಮತ್ತು ಲಖನೌ ಐಜಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ.

ವಿಎಚ್‌ಪಿ ವಕ್ತಾರರು ವಿಡಿಯೊ ಸಂದೇಶವನ್ನು ಸಹ ಬಿಡುಗಡೆ ಮಾಡಿದ್ದು, ದೇವಸ್ಥಾನಕ್ಕೆ ದೇಣಿಗೆಯ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡಲು ಯತ್ನಿಸುತ್ತಿರುವ ದಂಧೆಯ ಬಗ್ಗೆ ತಮಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿಸಿ ನಕಲಿ ಕ್ಯೂಆರ್ ಕೋಡ್ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಹಣ ವಸೂಲಿ ಮಾಡಲು ಕೆಲವರು ಯತ್ನಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ನೀಡಲಾಗಿದೆ ಎಂದು ಬನ್ಸಾಲ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಯಾರಿಗೂ ಯಾವುದೇ ರೀತಿಯಲ್ಲಿ ಹಣ ಸಂಗ್ರಹ ಮಾಡುವ ಹಕ್ಕನ್ನು ನೀಡಿಲ್ಲ. ಇಂತಹ ಪ್ರಯತ್ನಗಳನ್ನು ಮಾಡುವವರು ಜನರನ್ನು ವಂಚಿಸಲು ಬಯಸುತ್ತಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ತಕ್ಷಣವೇ ನಾನು ಗೃಹ ಸಚಿವಾಲಯ, ಡಿಜಿಪಿ ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ. ಜನರು ಕೂಡ ಜಾಗರೂಕರಾಗಿರಬೇಕು, ಇದು ಹಬ್ಬದ ಸಮಯ, ನಾವು ಆಹ್ವಾನಗಳನ್ನು ನೀಡಲಿದ್ದೇವೆ ಮತ್ತು ಯಾವುದೇ ರೀತಿಯ ದೇಣಿಗೆ ಅಥವಾ ಉಡುಗೊರೆಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ವಿಎಚ್​​ಪಿ ಪ್ರಕಾರ, ಅಭಿಷೇಕ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಯೋಧ್ಯೆ ದೇವಾಲಯದ ಅಭಿವೃದ್ಧಿಗೆ ಹಣವನ್ನು ಕೇಳಿದ್ದಾರೆ  ಎಂದು ವಿಎಚ್‌ಪಿ ಸದಸ್ಯ ಗಿರೀಶ್ ಭಾರದ್ವಾಜ್ ಉತ್ತರ ಪ್ರದೇಶ ಡಿಜಿಪಿ ಮತ್ತು ಐಜಿಗೆ ಪತ್ರ ಬರೆದಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಅಥವಾ ಜನರಿಗೆ ದೇವಸ್ಥಾನಕ್ಕೆ ಹಣ ಸಂಗ್ರಹಿಸಲು ಅಧಿಕಾರವಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿರುವ ಟ್ರಸ್ಟ್ ಆಗಿದೆ. ಭಕ್ತರನ್ನು ವಂಚಿಸಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಅಕ್ರಮವಾಗಿ ಹಣ ವಸೂಲಿ ಮಾಡುವ ದುರುದ್ದೇಶ ಕಾಣುತ್ತಿದೆ. ರಾಮಮಂದಿರ ಉದ್ಘಾಟನೆಗೆ ಇಡೀ ರಾಷ್ಟ್ರವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಇಂತಹ ಅವ್ಯವಹಾರಗಳನ್ನು ನಿಲ್ಲಿಸಬೇಕು. ನಿಮ್ಮ ಅವಗಾಹನೆಗಾಗಿ ನಾನು ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದೇನೆ. ದಯವಿಟ್ಟು ಅಗತ್ಯ ಕ್ರಮ ಕೈಗೊಳ್ಳಿ ಎಂದು ಭಾರದ್ವಾಜ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

–  ಅಂತರ್ಜಾಲ ಮಾಹಿತಿ

It is alleged that some people are cheating people on the pretext of donation collection. The Vishwa Hindu Parishad (VHP) has lodged a complaint with the Uttar Pradesh Police about this scam. The VHP has also issued a warning on social media, asking people not to fall prey to this scam.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror