Advertisement
MIRROR FOCUS

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವ | ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು | ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸಂಸದ ಬ್ರಿಜೇಶ್‌ ಚೌಟ ಒತ್ತಾಯ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದಕ್ಕೆ ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕ್ರಮಗಳಿಂದಾಗಿ ದಕ್ಷಿಣ ಕನ್ನಡದಲ್ಲಿ ಈಗ ಕಟ್ಟಡ ಕಾಮಗಾರಿಗಳಿಗೆ ಕೆಂಪುಕಲ್ಲು-ಮರಳು ಸಿಗದಂತೆ ಆಗಿದೆ. ಜಿಲ್ಲೆಯಲ್ಲಿ ಈಗಾಗಲೇ ನಿರ್ಮಾಣ ಕೆಲಸಗಳು ಬಹುತೇಕ ಸ್ಥಗಿತಗೊಂಡು ಅದನ್ನು ನೇರ ಹಾಗೂ ಪರೋಕ್ಷವಾಗಿ ನಂಬಿಕೊಂಡಿರುವ ಕಾರ್ಮಿಕರು, ವ್ಯಾಪಾರಸ್ಥರು, ಸರಕು ಸಾಗಾಣೆದಾರರು, ಉದ್ಯಮದವರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿರುವುದಕ್ಕೆ ಈ ಕಾಂಗ್ರೆಸ್‌ ಸರ್ಕಾರವೇ ನೇರ ಹೊಣೆ. ಕೆಂಪುಕಲ್ಲು-ಮರಳು ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದರೂ ಇಲ್ಲಿವರೆಗೆ , ಜಿಲ್ಲೆಯ ಉಸ್ತುವಾರಿ ಸಚಿವರಾಗಲಿ, ಗಣಿ ಸಚಿವರಾಗಲಿ ಅಥವಾ ಸಂಬಂಧಪಟ್ಟ ಇಲಾಖೆಯವರಾಗಲಿ ತತ್‌ಕ್ಷಣಕ್ಕೆ ಸ್ಪಂದಿಸುವ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರವು ಕೆಂಪು ಕಲ್ಲಿಗೆ ದುಬಾರಿ ರಾಯಲ್ಟಿ ವಿಧಿಸುವ ಮೂಲಕ ಜನಸಾಮಾನ್ಯರು ಮನೆ ಕಟ್ಟುವುದಕ್ಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಕೆಂಪುಕಲ್ಲಿಗೆ ಅತ್ಯಂತ ಕಡಿಮೆ ರಾಯಲ್ಟಿ ವಿಧಿಸುತ್ತಿದ್ದರೆ, ನಮ್ಮಲ್ಲಿ ದುಬಾರಿ ರಾಜಧನ ವಸೂಲಿ ಮಾಡಲಾಗುತ್ತಿದೆ. ಕರಾವಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದು, ಎರಡು ವರ್ಷ ಕಳೆದರೂ ಕೆಂಪುಗಲ್ಲು ಹಾಗೂ ಮರಳು ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್‌ ಸರ್ಕಾರವು ಅಸಂಬದ್ಧ ತೀರ್ಮಾನಗಳನ್ನು ತೆಗೆದುಕೊಂಡು ಕೆಂಪುಕಲ್ಲಿನ ಕೃತಕ ಅಭಾವನ್ನು ಸೃಷ್ಟಿಸಿ ಜನಸಾಮಾನ್ಯರು ಹಾಗೂ ಕಾರ್ಮಿಕರ ಮೇಲೆ ಬರೆ ಎಳೆಯುತ್ತಿದೆ. ಹೀಗಾಗಿ ಸರ್ಕಾರವು ಈ ಗಂಭೀರ ಸಮಸ್ಯೆಯನ್ನು ಪರಿಶೀಲಿಸಿ ವಾಸ್ತವಿಕ ನೆಲೆಯಲ್ಲಿ ನೀತಿ- ನಿಯಮಗಳನ್ನು ರೂಪಿಸಬೇಕು ಎಂದು ಕ್ಯಾ. ಚೌಟ ಆಗ್ರಹಿಸಿದ್ದಾರೆ.

ಕೆಂಪುಕಲ್ಲು ಹಾಗೂ ಮರಳು ಸಮಸ್ಯೆ ಬಗ್ಗೆ ಬಿಜೆಪಿ ದಕ್ಷಿಣ ಕನ್ನಡ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿರುವುದು ಮಾತ್ರವಲ್ಲ, ಕೆಡಿಪಿ ಸೇರಿದಂತೆ ಅನೇಕ ಸಭೆಗಳಲ್ಲಿ ಕೆಂಪು ಕಲ್ಲು ಮರಳು ಸಮಸ್ಯೆ ಬಗ್ಗೆ ದ್ವನಿಎತ್ತುತ್ತಿದೆ. ಹಲವು ಸಂಘಟನೆಗಳು ಕೂಡಾ ಸಮಸ್ಯೆಯ ಗಂಭೀರತೆಯನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದೆ. ಇಷ್ಟಾಗಿಯೂ ಈ ಸಮಸ್ಯೆ ಬಗೆಹರಿಸುವುದಕ್ಕೆ ಕಾಂಗ್ರೆಸ್‌ ಸರ್ಕಾರ ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸದಿರುವುದನ್ನು ನೋಡಿದರೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜ್ವಲಂತ ವಿಚಾರಗಳ ಕಡೆಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿರುವುದು ಸ್ಪಷ್ಟವಾಗುತ್ತದೆ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದ ಉಸ್ತುವಾರಿ ಸಚಿವರು ಹೇಳಿಕೆ ನೀಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಈ ಬಗ್ಗೆ ಗಣಿ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ ಸರ್ಕಾರದ ಮಟ್ಟದಲ್ಲಿಯೇ ನಿಯಮ ಸಡಿಲಿಕೆಯಾಗುವವರೆಗೆ ನಾವೇನೂ ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹೀಗಿರುವಾಗ, ಸರ್ಕಾರವು ಈ ಕೂಡಲೇ ಎಚ್ಚೆತ್ತುಕೊಂಡು ಕೆಂಪುಕಲ್ಲು, ಮರಳು ಪೂರೈಕೆಗೆ ಅಡ್ಡಗಾಲು ಹಾಕುವ ಬದಲು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಯು ಕಾಂಗ್ರೆಸ್‌ ಸರ್ಕಾರ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕ್ರಮಗಳನ್ನು ಖಂಡಿಸಿ ಮತ್ತಷ್ಟು ತೀವ್ರ ರೀತಿಯ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago