ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

April 9, 2023
10:33 AM

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ  ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ  ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.

ಆದರೆ, ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು ಕ್ರಮೇಣವಾಗಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸದ್ಯ ಮಳೆ ಸಾಧ್ಯತೆ ಇದೆ.ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳ ಆರಂಭದಲ್ಲಿ, ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವಾರು ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
August 31, 2026
2:46 PM
by: ಸಾಯಿಶೇಖರ್ ಕರಿಕಳ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror