2019-20 ರ ಸಾಲಿನ ಪೋಸ್ಟ್ ಮೆಟ್ರಿಕ್, ಪ್ರೀ ಮೆಟ್ರಿಕ್ , ಮೆರಿಟ್ – ಕಮ್ – ಮೀನ್ಸ್ ವಿದ್ಯಾರ್ಥಿ ವೇತನ ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದ ಬಗ್ಗೆ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ನಿಯೋಗವು ದೆಹಲಿಯಿಂದ ಪುತ್ತೂರಿಗೆ ಆಗಮಿಸಿದ ಐ.ಐ.ಟಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ,ಮನವಿ ಸಲ್ಲಿಸಿದರು.
ಕಳೆದ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವು ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕೋರೋನ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಸಲದ ಶಾಲಾ,ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೆ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂತಕ್ಕೀಡಾಗಿದ್ದಾರೆ. ಆದ್ದರಿಂದ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಶೀಘ್ರ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸವಾದ್ ಕಲ್ಲರ್ಪೆ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ, ಉಪಾಧ್ಯಕ್ಷ ಅಫ್ರೀದ್ ಕೂರ್ನಡ್ಕ, ಸುಳ್ಯ ಅಧ್ಯಕ್ಷ ಅರ್ಫಿದ್ ಅಡ್ಕಾರ್, ಸಂಟ್ಯಾರ್ ಏರಿಯಾ ಅಧ್ಯಕ್ಷ ಇಮ್ರಾನ್ ಕಲ್ಲರ್ಪೆ , ಉಪ್ಪಿನಂಗಡಿ ಏರಿಯಾ ಅಧ್ಯಕ್ಷ ರಿಝ್ವಾನ್, ಸಬೀರ್ ಕಲ್ಲರ್ಪೆ, ಸಂಶೀರ್ ಸವಣೂರು ಉಪಸ್ಥಿತರಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…