2019-20 ರ ಸಾಲಿನ ಪೋಸ್ಟ್ ಮೆಟ್ರಿಕ್, ಪ್ರೀ ಮೆಟ್ರಿಕ್ , ಮೆರಿಟ್ – ಕಮ್ – ಮೀನ್ಸ್ ವಿದ್ಯಾರ್ಥಿ ವೇತನ ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದ ಬಗ್ಗೆ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ನಿಯೋಗವು ದೆಹಲಿಯಿಂದ ಪುತ್ತೂರಿಗೆ ಆಗಮಿಸಿದ ಐ.ಐ.ಟಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ,ಮನವಿ ಸಲ್ಲಿಸಿದರು.
ಕಳೆದ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವು ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕೋರೋನ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಸಲದ ಶಾಲಾ,ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೆ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂತಕ್ಕೀಡಾಗಿದ್ದಾರೆ. ಆದ್ದರಿಂದ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಶೀಘ್ರ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸವಾದ್ ಕಲ್ಲರ್ಪೆ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ, ಉಪಾಧ್ಯಕ್ಷ ಅಫ್ರೀದ್ ಕೂರ್ನಡ್ಕ, ಸುಳ್ಯ ಅಧ್ಯಕ್ಷ ಅರ್ಫಿದ್ ಅಡ್ಕಾರ್, ಸಂಟ್ಯಾರ್ ಏರಿಯಾ ಅಧ್ಯಕ್ಷ ಇಮ್ರಾನ್ ಕಲ್ಲರ್ಪೆ , ಉಪ್ಪಿನಂಗಡಿ ಏರಿಯಾ ಅಧ್ಯಕ್ಷ ರಿಝ್ವಾನ್, ಸಬೀರ್ ಕಲ್ಲರ್ಪೆ, ಸಂಶೀರ್ ಸವಣೂರು ಉಪಸ್ಥಿತರಿದ್ದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…