ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಕುಮಾರಧಾರಾದಿಂದಲೇ ಕಾಂಕ್ರೀಟ್ ರಸ್ತೆ ಆರಂಭವಾಗಿದೆ ಮಾಸ್ಟರ್ ಪ್ಲಾನ್ ಸಮಿತಿಯ ಮೂಲಕ ವಿವಿಧ ಕಾಮಗಾರಿಗಳು ನಡೆಯುತ್ತಿದೆ. ಇದು ಅಗತ್ಯ ಹಾಗೂ ಅನಿವಾರ್ಯ ಕೂಡಾ. ಕುಕ್ಕೆ ಸುಬ್ರಹ್ಮಣ್ಯ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಪಡೆದಿರುವ ಪುಣ್ಯ ಸ್ಥಳ, ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಾರೆ, ಹೀಗಾಗಿ ಮೂಲಭೂತವಾದ ಭೌತಿಕ ಅಭಿವೃದ್ಧಿ ಮಾಡಿಸಲೇ ಬೇಕಾದ ಅನಿವಾರ್ಯತೆ ಇದೆ. ಶುಚಿತ್ವ, ಪಾರ್ಕಿಂಗ್ ವ್ಯವಸ್ಥೆ ಇದೆಲ್ಲಾ ಆಗಬೇಕಾದ್ದೇ. ಹೀಗೆ ಅಭಿವೃದ್ಧಿಯ ವೇಳೆಗೆ ಈಗ ಸಂಕಷ್ಟದಲ್ಲಿ ಇರುವುದು ಇಲ್ಲಿನ ಸರಕಾರಿ ಶಾಲೆ. ಈ ಚಿತ್ರ ನೋಡಿ.. ಎರಡೂ ಕಡೆ ಕಾಂಕ್ರೀಟ್ ಬಂದು ನಿಂತಿದೆ.. ಇನ್ಯಾವಾಗ ಶಾಲೆ ಒಡೆಯುವುದು …? ಈ ಚಿತ್ರ ಮನಸಿಗೆ ನಾಟುತ್ತಿದೆ.
ಹಾಗೆಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ವಿದ್ಯಾದಾನವೂ ನಡೆಯುತ್ತಿದೆ. ಅನೇಕ ಮಕ್ಕಳಿಗೆ ಉಚಿತ ಶಿಕ್ಷಣ, ಅನ್ನದಾನವೂ ನಡೆಯುತ್ತದೆ, ಗುಣಮಟ್ಟದ ಕಡೆಗೂ ಆದ್ಯತೆ ನೀಡಲಾಗುತ್ತಿದೆ. ಆದರೆ ಈಗ ಎರಡೂ ಕಡೆ ಕಾಂಕ್ರೀಟ್ ಆಗಿ ನಿಂತಿರುವ ಶಾಲೆ ಸರಕಾರಿ ಶಾಲೆ. ಸರಕಾರದಿಂದಲೇ ನಡೆಸಲ್ಪಡುವ ಶಾಲೆ ಒಂದು ಕಡೆ ಸರಕಾರದಿಂದಲೇ ಆಡಳಿತಕ್ಕೊಳಪಡುವ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿ ಒಂದು ಕಡೆ. ಎರಡೂ ಸರಕಾರವೇ. ಈಗ ಸದ್ಯದ ಮಟ್ಟಿಗೆ ಈ ಶಾಲೆಯ ಮಕ್ಕಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಸಲ್ಪಡುವ ಕಾಲೇಜಿನ ಒಂದು ಕೊಠಡಿಯನ್ನು ವಿಭಾಗ ಮಾಡಿ ಅಲ್ಲಿಗೆ ಮಕ್ಕಳನ್ನು, ಶಾಲೆಯನ್ನು ಸ್ಥಳಾಂತರ ಮಾಡಲಾಗುತ್ತದೆ ಎಂಬುದು ಸದ್ಯದ ಮಾಹಿತಿ. ಅದೂ ಸುಮಾರು 1.5 ಕಿಮೀ ಈ ಪುಟ್ಟ ಮಕ್ಕಳು ಕಾಂಕ್ರೀಟ್ ರಸ್ತೆಯ ಬದಿಯಲ್ಲಿ ನಡೆದುಕೊಂಡ ಸಾಗಬೇಕು. ಅಚ್ಚರಿ ಎಂದರೆ ಯಾವುದೇ ವ್ಯಕ್ತಿಗಳೂ ಈ ಬಗ್ಗೆ ಮಾತನಾಡುತ್ತಿಲ್ಲ ಏಕೆಂದರೆ ಇಲ್ಲಿ ಕಲಿಯುವ ಬಹುತೇಕ ವಿದ್ಯಾರ್ಥಿಗಳು ಬಡವರು. ಹೀಗಾಗಿ ಆ ಮಾತುಗಳಿಗೆ “ವಾಯ್ಸ್” ಇಲ್ಲವಾಗಿದೆ. ಹಾಗಂತ ಭವಿಷ್ಯದಲ್ಲಿ ಮಕ್ಕಳ ಸಮಸ್ಯೆ ಬಗ್ಗೆ ಮಾತನಾಡಿದರೆ ಹೌದು ಎನ್ನುತ್ತಾರೆ, ಶಾಲೆ ಮಚ್ಚಬಹುದು ಎನ್ನುತ್ತಾರೆ. ಪ್ರತ್ಯೇಕ ಕೊಠಡಿ ಆಗುತ್ತದೆ ಎನ್ನುತ್ತಾರೆ. ಎಲ್ಲವೂ ಹೌದು. ಆದರೆ ಖಚಿತವಾದ ಯಾವುದೇ ನಿರ್ಧಾರಗಳು ಹೊರಬಿದ್ದಿಲ್ಲ ಎನ್ನುವುದು ವಿಷಾದವಷ್ಟೇ.
ಅನಾದಿಕಾಲದಿಂದಲೂ ದೇವಸ್ಥಾನಗಳು ಪ್ರತೀ ವ್ಯಕ್ತಿಯ ಬೌದ್ಧಿಕ ಅಭಿವೃದ್ಧಿಗೆ ಮುನ್ನುಡಿ ಬರೆಯುತ್ತಿತ್ತು, ಈಗಲೂ ಬರೆಯುತ್ತಿದೆ. ವಿದ್ಯಾರಂಭವೂ ದೇವಸ್ಥಾನ, ದೇವರ ಮುಂದೆಯೇ ನಡೆಯುತ್ತದೆ. ಮೊದಲ ತುತ್ತು ಕೂಡಾ ಮಕ್ಕಳಿಗೆ ದೇವರ ಮುಂದೆಯೇ ನೀಡಲಾಗುತ್ತದೆ. ಆ ಬಳಿಕ ಪ್ರತೀ ಹೆಜ್ಜೆಯೂ ವ್ಯಕ್ತಿಯ ಬೌದ್ಧಿಕ ಅಭಿವೃದ್ಧಿಗೆ ದೇವಸ್ಥಾನಗಳು ಕಾರಣವಾಗುತ್ತಿತ್ತು. ಇಲ್ಲೂ ಕೂಡಾ ದೇವಸ್ಥಾನದ ವತಿಯಿಂದಲೇ ಕಾಲೇಜು ನಡೆಸಲಾಗುತ್ತಿದೆ, ಅದರ ಜೊತೆಯೇ ಈ ಸರಕಾರಿ ಶಾಲೆಯೂ ಸುಸಜ್ಜಿತವಾಗಿ ನಡೆಯಲಿ, ಇನ್ನಷ್ಟು ಕಲಿಕಾ ವ್ಯವಸ್ಥೆಗಳು ಲಭ್ಯವಾಗಲಿ ಎಂಬುದಷ್ಟೇ ಆಶಯ.
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…
ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…
ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…
ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…
ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…