Advertisement
Opinion

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

Share

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ  ಇವರೆಲ್ಲರ  ಪಾತ್ರ ಅತ್ಯಂತ ಮಹತ್ವದ್ದಾಗಿದೆ.  ಪ್ರತಿಯೊಂದು ಹೊಸ ಶೈಕ್ಷಣಿಕ ವರ್ಷವು ಹೊಸ ಅವಕಾಶಗಳ ದ್ವಾರವಾಗಿದ್ದು, ಸರಿಯಾದ ತಯಾರಿಯಿಂದ ನಾವು ಅದನ್ನು ಸಾರ್ಥಕಗೊಳಿಸಬಹುದು.  ವಿದ್ಯಾರ್ಥಿಗಳು ,ಪೋಷಕರು  ಹಾಗೂ ಶಿಕ್ಷಕರು  ಈ ಮೂರುತರದ  (Triangle) ಸಮನ್ವಯತೆಯ  ಪಾಲನೆ ಮೇಲೆ  ಯಶಸ್ಸು ಅವಲಂಬಿತವಾಗಿದೆ.

ವಿದ್ಯಾರ್ಥಿಗಳು ಮಾಡಬೇಕಾದ ತಯಾರಿ : ಹೊಸ ಶೈಕ್ಷಣಿಕ ವರ್ಷವು ಹೊಸ ಆರಂಭ. ಹಳೆ ಎಡವಟ್ಟುಗಳನ್ನು ಮರೆತು ಹೊಸ ಉತ್ಸಾಹದಿಂದ ಮುಂದುವರೆಯಬೇಕಾಗಿದೆ ಮತ್ತು  ಸಮಯಪಾಲನೆ ಮತ್ತು ವಿಷಯದ ಮೇಲೆ ಗಮನ ಅಭಿವೃದ್ಧಿಪಡಿಸಲು ( focussed  ) ದಿನಚರಿಯ ಅಭ್ಯಾಸ ಶುರುಮಾಡಬೇಕಿದೆ . ಸಾಧ್ಯವಾಧಷ್ಟು ಮೊಬೈಲ್ ಅಥವಾ ಟಿವಿ ಬಳಕೆಯನ್ನು ನಿಯಂತ್ರಿಸಿ, ಓದಿಗೆ ತಯಾರಿ ಮಾಡಿಕೊಳ್ಳಬೇಕು. ಹಿಂದಿನ ತರಗತಿಯ ಪಠ್ಯವನ್ನು ಪುನರಾವೃತ್ತಿ ಮಾಡಿ – ಮುಖ್ಯ ಅಂಶಗಳನ್ನು ನೆನಪಿನಲ್ಲಿಡಿ.ಮತ್ತು ಹೊಸ ತರಗತಿಯ ಪಠ್ಯಪುಸ್ತಕಗಳನ್ನು ಪಡೆದು, ಮೇಲಿಂದ  ಮೇಲೆ ಅವಲೋಕನ ಮಾಡಿದರೆ ಪಾಠ ಶ್ರವಣಕ್ಕೆ ಆಸಕ್ತಿ ಹುಟ್ಟುತ್ತದೆ. ಸ್ವತಃ  ಮಾಡಬೇಕಾದ ಕೆಲಸಗಳ ಪಟ್ಟಿ (TO DO LIST ) ಅಥವಾ ಸ್ಟಡಿ ಪ್ಲ್ಯಾನ್ ಸಿದ್ಧಮಾಡಿಕೊಳ್ಳಿ.

ಶಾಲೆ ಆರಂಭದ ಚೆಕ್‌ಲಿಸ್ಟ್ (Checklist for Parents & Students)

(A) ಶೈಕ್ಷಣಿಕ ಸಾಮಗ್ರಿಗಳು:

  • ಪಠ್ಯಪುಸ್ತಕಗಳು (Textbooks)
  • ಪುಸ್ತಕ ಬ್ಯಾಗ್ ಮತ್ತು ಪೆನ್ ಕಿಟ್
  • ನೋಟ್ ಬುಕ್ಸ್ (ವಿಷಯದ ಪ್ರಕಾರ)
  • ಪೆನ್, ಪೆನ್ಸಿಲ್, ಇರೆಸರ್, ಶಾರ್ಪನರ್
  • ಕಲಾ ವಸ್ತುಗಳು (ಅಗತ್ಯವಿದ್ದರೆ – ಕ್ರೇಯಾನ್, ಗ್ರಾಫ್ ಬುಕ್)

 (B)ತಯಾರಿ ಹಾಗೂ ವ್ಯವಸ್ಥೆ:

  • ಶಾಲೆಯ ಸಮವಸ್ತ್ರ ಜೂತೆ, ಟೈ, ಬೆಲ್ಟ್,ಶೂಸ್
  • ಐ.ಡಿ ಕಾರ್ಡ್ (ಅಪ್ಡೇಟ್ ಮಾಡಿಸಬೇಕು)
  • ನೀರಿನ ಬಾಟಲ್, ಟಿಫಿನ್ ಬಾಕ್ಸ್
  • ಎಲ್ಲಾ ವಸ್ತುಗಳಿಗೆ ಹೆಸರಿನ ಟ್ಯಾಗ್ ಹಾಕಿ
  • ಶಾಲಾ ಸಮಯಕ್ಕೆ ಅನುಗುಣವಾಗಿ ಅಲಾರಂ ಅಥವಾ ದಿನಚರಿ ರೂಪಿಸಿ

ಪ್ರಾಮಾಣಿಕತೆ, ಶಿಷ್ಟಾಚಾರ ಮತ್ತು ಶಿಸ್ತು ಮಕ್ಕಳಿಗೆ ಶ್ರೇಷ್ಠ ಸಂಸ್ಕಾರ ನೀಡುತ್ತವೆ.

ಪೋಷಕರ ತಯಾರಿ ಮತ್ತು ಪಾತ್ರ

  • ಮುಖ್ಯವಾಗಿ ಪೋಷಕರು ಪರ್ಯಾಯ ಶಿಕ್ಷಕರಾಗಡೇ  ಮಾರ್ಗದರ್ಶಕರಾಗಿದ್ದಾರೆ ಹೆಚ್ಚು ಪರಿಣಾಮಕಾರಿ
  • ಮಕ್ಕಳಿಂದ ಹೆಚ್ಚು ಅಂಕ ನಿರೀಕ್ಷಿಸುವ ಮೊದಲು ಅವರಿಗೆ ಬೇಕಾದ ಸಹಕಾರ ನೀಡಿ.
  • ಮಕ್ಕಳೊಂದಿಗೆ ನಿತ್ಯ 10–15 ನಿಮಿಷಗಳ ಗುಣಮಟ್ಟದ ಸಂವಾದ ಎಳೆಯುವ ಚಟುವಟಿಕೆಗೆ ಅಭ್ಯಾಸ ಮಾಡಿರಿ.
  • ಶಾಲೆಯೊಂದಿಗೆ ಸಹಕಾರ ಮತ್ತು ಸಂಪರ್ಕದಲ್ಲಿರಿ .ಶಾಲೆ ನೀಡುವ ಮಾಹಿತಿಯನ್ನು ಎಚ್ಚರಿಕೆಯಿಂದ ಗಮನಿಸಿ (ಡೈರಿ, ನೋಟಿಸ್, ವಾಟ್ಸಾಪ್ ಗ್ರೂಪ್).
  • ಪೋಷಕರ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ – ಇದು ಶಿಕ್ಷಕರೊಂದಿಗೆ ಉತ್ತಮ ಸಂಬಂಧಕ್ಕೆ ದಾರಿ ಮಾಡುತ್ತದೆ.ಮತ್ತು ಕಡ್ಡಾಯವಾಗಿ ಮಕ್ಕಳೆದುರು ಅವರು ಕಲಿಯುವ ಶಾಲೆಯನ್ನಾಗಲಿ,ಶಿಕ್ಷಕರನ್ನಾಗಲಿ ತೆಗಳಬೇಡಿ.
  • ಮಕ್ಕಳ ಆರೋಗ್ಯ ಮತ್ತು ಜೀವನಶೈಲಿ ಮೇಲೆ ಗಮನವಿರಿಸಿ ಮತ್ತು ಸರಿಯಾದ ಆಹಾರ, ನಿದ್ರೆ ಮತ್ತು ಶಾರೀರಿಕ ಚಟುವಟಿಕೆಗೆ ಪ್ರಾಧಾನ್ಯ ನೀಡಿ.
  • ಮಕ್ಕಳ ಭಾವನಾತ್ಮಕ ಆರೋಗ್ಯವನ್ನು ಅಳೆಯುತ್ತಿರಿ – ಬೇಧಭಾವ, ಒತ್ತಡ ಅಥವಾ ಆತಂಕದ ಲಕ್ಷಣಗಳನ್ನು ಗಮನಿಸಿ.ಮತ್ತು ಅವರಿಗೆ ಆತ್ಮವಿಶ್ವಾಸವನ್ನು ತುಂಬಿ .

ಶಿಕ್ಷಕರ ಪೂರ್ವಸಿದ್ಧತೆ

  • ಶಿಕ್ಷಕರು ಪಾಠಗಳ ಯೋಜನೆ ಮತ್ತು ಪೂರ್ತಿ ವರ್ಷದ ಅಗತ್ಯತೆಗಳ  ತಯಾರಿಯನ್ನು ಪ್ರಾರಂಭದಿಂದಲೇ ಮಾಡಿಕೊಂಡಿರಬೇಕು..
  • ಪಠ್ಯ ವಿಷಯದ ತಾಂತ್ರಿಕ ವಿನ್ಯಾಸ ಮಾಡುವುದು ಅವಶ್ಯಕ. ಮಾಧ್ಯಮಗಳ ಸಮರ್ಪಕ ಬಳಕೆ (ಪಿಕ್ಚರ್ ಕಾರ್ಡ್, ವಿಡಿಯೋ, ಚಾರ್ಟ್ ಇತ್ಯಾದಿ) ಉಪಯುಕ್ತ.
  • ಪ್ರತಿ ವಿದ್ಯಾರ್ಥಿಯ ಸಾಮರ್ಥ್ಯವನ್ನು ಗುರುತಿಸಿ , ಮೃದು ಶೈಕ್ಷಣಿಕ ಮತ್ತು ಪರಿಣಾಮಕಾರಿ ಮುನ್ನಡೆಗೆ ಯೋಜನೆ ರೂಪಿಸಿ.
  • ಡಿಜಿಟಲ್ ಉಪಕರಣಗಳನ್ನು ಕಲಿಕೆಯಲ್ಲಿ ಸಮರ್ಪಕವಾಗಿ ಬಳಸಲು ಅಭ್ಯಾಸ ಮಾಡುವುದರ ಮೂಲಕ ,ತಂತ್ರಜ್ಞಾನವನ್ನು ಪರಿಣಾಮ ಕಾರಿಯಾಗಿ ಬಳಸಿಕೊಳ್ಳುವುದು.
  • ಸ್ಮಾರ್ಟ್ ಬೋರ್ಡ್ ಮತ್ತು ಗೂಗಲ್ ಕ್ಲಾಸ್‌ರೂಂ, ನಂತಹ ತಂತ್ರಜ್ಞಾನಗಳು ಕಲಿಕೆಗೆ  ಹೆಚ್ಚಿನ ಸಹಾಯ ಮಾಡುತ್ತವೆ.
  • ಒತ್ತಡವಿಲ್ಲದ, ಸಮಾನತೆ ಹಾಗೂ ಗೌರವದ ಆಧಾರದ ಮೇಲೆ ವಿದ್ಯಾರ್ಥಿಗಳೊಂದಿಗೆ ಒಂದು ರೀತಿಯ ಸ್ನೇಹಯುತ ಸಂಬಂಧವನ್ನು ನಿರ್ಮಾಣಮಾಡುವುದರ ಮೂಲಕ ಒತ್ತಡ ರಹಿತ ಕಲಿಕೆ ವಿಧಾನವಾಗಬೇಕು.
  • ವಿದ್ಯಾರ್ಥಿಗಳು ಶ್ರಮಪೂರ್ವಕವಾಗಿ ಓದುವ, ತೊಡಗಿಸಿಕೊಳ್ಳುವ ಪರಿಸರವನ್ನು ನಿರ್ಮಿಸಬೇಕು.

ಶಾಲೆಯ ಹೊಸ ವರ್ಷದ ಆರಂಭವು ವಿದ್ಯಾರ್ಥಿಗಳಿಗೆ ಅವಕಾಶಗಳ ಮಹಾಪೂರ , ಪೋಷಕರಿಗೆ ಉಪಸ್ಥಿತಿಯ ಆಧಾರ, ಮತ್ತು ಶಿಕ್ಷಕರಿಗೆ ಪರಿವರ್ತನೆಯ ಶಕ್ತಿಕೇಂದ್ರವಾಗಿದೆ. ಈ ಮೂರು ಕಿಡಿಗೆ ಸಮಾನ ಪ್ರಮಾಣದಲ್ಲಿ ಎಣ್ಣೆ ಹಾಕಿದರೆ ಮಾತ್ರ ವಿದ್ಯೆಯ ದೀಪ ಪ್ರಕಾಶಿಸುತ್ತಿದೆ.

ಎಲ್ಲ  ಮಕ್ಕಳ ಶೈಕ್ಷಣಿಕ ಯಾತ್ರೆಯ ಭಾಗವಾಗಲು ನಿಮ್ಮೆಲ್ಲರಿಗೂ ಶುಭವಾಗಲಿ!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಕುಮಾರಸುಬ್ರಹ್ಮಣ್ಯ ಮುಳಿಯಾಲ

ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಅವರು, ಬೆಂಗಳೂರಿನ ಬಯೋ ಕ್ರಾಸ್ ಕೆಮ್, ಎಲ್ಎಲ್ ಪಿ  ಎಂಬ ಔಷಧಿ ಕಂಪೆನಿಯಲ್ಲಿ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ. ದ.ಕ. ಜಿಲ್ಲೆಯ ಪುತ್ತೂರಿನ ಸಮೀಪ ಹಿಂದಾರು ಎಂಬಲ್ಲಿ ಅಡಿಕೆ , ತೆಂಗು, ಕರಿಮೆಣಸು ಕೃಷಿ ಭೂಮಿ ಹೊಂದಿದ್ದಾರೆ. ಮೂಲತಃ ಅಡ್ಯನಡ್ಕ ಸಮೀಪದ ಮುಳಿಯಾಲದವರಾಗಿದ್ದು ಕೃಷಿ ಭೂಮಿ ಹೊಂದಿದ್ದು, ಕೃಷಿ ಚಿಂತನೆಗಳನ್ನು ಹೊಂದಿದ್ದಾರೆ.

Published by
ಕುಮಾರಸುಬ್ರಹ್ಮಣ್ಯ ಮುಳಿಯಾಲ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

2 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

3 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

13 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

14 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

19 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

19 hours ago