ಕಳೆದ ವರ್ಷ ಬಿಜೆಪಿ ಸರ್ಕಾರ ಪರಿಷ್ಕರಿಸಿದ್ದ ಪಠ್ಯ ಪುಸ್ತಕ ವಿಷಯದ ಮೇಲೆ ಭಾರಿ ಚರ್ಚೆ ಹಾಗೂ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿವಾದಿತ ಪಠ್ಯಗಳನ್ನು ಕೈ ಬಿಡಲಾಗುವುದು ಎಂದು ಹೇಳಿತ್ತು. ಅದರಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿವಾದಿತ ಪಠ್ಯ ವಿಷಯಗಳನ್ನು ಪರಿಷ್ಕರಿಸಲು ಮುಂದಾಗಿದ್ದಾರೆ.
ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾಡದೇ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದ್ದು, ಇದೀಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿವಾದಿತ ಪಠ್ಯದ ಅಂತಿಮ ವರದಿ ಸಿದ್ಧಪಡಿಸಿದ್ದು, ಇಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಅಲ್ಲದೇ ಕ್ಯಾಬಿನೆಟ್ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಈಗಾಲೇ ಶಾಲೆಗಳು ಆರಂಭವಾಗಿದ್ದು, ಪುಸ್ತಕಗಳು ಮುದ್ರಣಗೊಂಡು ಶಾಲೆಗಳಿಗೂ ತಲುಪಿವೆ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಮಯ ಇಲ್ಲವೆಂದು ಕೆಲ ಪಠ್ಯವನ್ನು ಬೋಧನೆ ಮಾಡದಂತೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…