ಕಳೆದ ವರ್ಷ ಬಿಜೆಪಿ ಸರ್ಕಾರ ಪರಿಷ್ಕರಿಸಿದ್ದ ಪಠ್ಯ ಪುಸ್ತಕ ವಿಷಯದ ಮೇಲೆ ಭಾರಿ ಚರ್ಚೆ ಹಾಗೂ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿವಾದಿತ ಪಠ್ಯಗಳನ್ನು ಕೈ ಬಿಡಲಾಗುವುದು ಎಂದು ಹೇಳಿತ್ತು. ಅದರಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿವಾದಿತ ಪಠ್ಯ ವಿಷಯಗಳನ್ನು ಪರಿಷ್ಕರಿಸಲು ಮುಂದಾಗಿದ್ದಾರೆ.
ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾಡದೇ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದ್ದು, ಇದೀಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿವಾದಿತ ಪಠ್ಯದ ಅಂತಿಮ ವರದಿ ಸಿದ್ಧಪಡಿಸಿದ್ದು, ಇಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಅಲ್ಲದೇ ಕ್ಯಾಬಿನೆಟ್ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಈಗಾಲೇ ಶಾಲೆಗಳು ಆರಂಭವಾಗಿದ್ದು, ಪುಸ್ತಕಗಳು ಮುದ್ರಣಗೊಂಡು ಶಾಲೆಗಳಿಗೂ ತಲುಪಿವೆ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಮಯ ಇಲ್ಲವೆಂದು ಕೆಲ ಪಠ್ಯವನ್ನು ಬೋಧನೆ ಮಾಡದಂತೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…