ಕಳೆದ ವರ್ಷ ಬಿಜೆಪಿ ಸರ್ಕಾರ ಪರಿಷ್ಕರಿಸಿದ್ದ ಪಠ್ಯ ಪುಸ್ತಕ ವಿಷಯದ ಮೇಲೆ ಭಾರಿ ಚರ್ಚೆ ಹಾಗೂ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿವಾದಿತ ಪಠ್ಯಗಳನ್ನು ಕೈ ಬಿಡಲಾಗುವುದು ಎಂದು ಹೇಳಿತ್ತು. ಅದರಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿವಾದಿತ ಪಠ್ಯ ವಿಷಯಗಳನ್ನು ಪರಿಷ್ಕರಿಸಲು ಮುಂದಾಗಿದ್ದಾರೆ.
ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾಡದೇ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದ್ದು, ಇದೀಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿವಾದಿತ ಪಠ್ಯದ ಅಂತಿಮ ವರದಿ ಸಿದ್ಧಪಡಿಸಿದ್ದು, ಇಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಅಲ್ಲದೇ ಕ್ಯಾಬಿನೆಟ್ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಈಗಾಲೇ ಶಾಲೆಗಳು ಆರಂಭವಾಗಿದ್ದು, ಪುಸ್ತಕಗಳು ಮುದ್ರಣಗೊಂಡು ಶಾಲೆಗಳಿಗೂ ತಲುಪಿವೆ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಮಯ ಇಲ್ಲವೆಂದು ಕೆಲ ಪಠ್ಯವನ್ನು ಬೋಧನೆ ಮಾಡದಂತೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…