ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ಕಾರಣದಿಂದಾಗಿ ಯಾವುದೇ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿತ್ತು. ಈಗ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿಸಲಾಗಿದೆ ಎಂದಿದ್ದಾರೆ.
ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಡಿಸೆಂಬರ್ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳದೇ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡುವುದು ಎಂದಿದ್ದಾರೆ. ಪೋಷಕರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವುದು. ಈ ಪ್ರವಾಸಕ್ಕೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುವುದು.ಪ್ರವಾಸ ಕೈಗೊಳ್ಳುವ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆಯನ್ನು ನವೀಕರಿಸಬೇಕು ಎಂದು ಸೂಚಿಸಿದ್ದಾರೆ.
ಪ್ರವಾಸದ ಸಮಯದಲ್ಲಿ ಯಾವುದೇ ಅವಘಡ ಸಂಭವಿಸಿದರೆ ಶಾಲಾ ಮುಖ್ಯಸ್ಥರೇ ನೇರ ಹೊಣೆಯಾಗಿರುತ್ತಾರೆ. ಇದಕ್ಕೆ ಇಲಾಖೆ ಜವಾಬ್ದಾರಿಯಲ್ಲ. ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೆಎಸ್ಆರ್ ಟಿಸಿ, ರಾಜ್ಯ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲೇ ಕರೆದೊಯ್ಯಬೇಕು ಎಂದು ತಿಳಿಸಿದ್ದಾರೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…