Advertisement
MIRROR FOCUS

#Rubber | ಅಡಿಕೆ ಹಾಗೂ ರಬ್ಬರ್‌ ಎಲೆಚುಕ್ಕಿ ವೈರಸ್‌ಗಳು ಪರಸ್ಪರ ಸಂಬಂಧ ಹೊಂದಿದೆಯೇ ? | ರಬ್ಬರ್‌ ಮಂಡಳಿಯಿಂದ ಅಧ್ಯಯನಕ್ಕೆ ಸಿದ್ಧತೆ |

Share

ಅಡಿಕೆ ಹಾಗೂ ರಬ್ಬರ್‌ ಬೆಳೆಯಲ್ಲಿ ಎಲೆಚುಕ್ಕಿ ರೋಗ ಕಂಡುಬರುತ್ತಿದೆ. ಇದರ ಜೊತೆಗೇ ಎರಡೂ ಬೆಳೆಯಲ್ಲಿ ಕೊಳೆರೋಗವೂ ಸಾಮಾನ್ಯ ಅಂಶವಾಗಿದೆ. ಹೀಗಾಗಿ ಎರಡೂ ಬೆಳೆಯಲ್ಲಿ ಕಂಡುಬರುವ ವೈರಸ್‌ ಗಳು ಸಾಮಾನ್ಯ ಪ್ರಬೇಧವೇ ಎಂಬುದರ ಬಗ್ಗೆ ವೈಜ್ಞಾನಿಕವಾದ ಸಂಶೋಧನೆ ನಡೆಸಲು ಭಾರತೀಯ ರಬ್ಬರ್‌ ಬೋರ್ಡ್ ಆಸಕ್ತಿ ವಹಿಸಿದೆ.

ದಕ್ಷಿಣ ಕನ್ನಡ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಹಾಗೂ ರಬ್ಬರ್‌ ಸಾಮಾನ್ಯ ಬೆಳೆಯಾಗಿದೆ. ಎರಡೂ ಬೆಳೆಯಲ್ಲಿ ಎಲೆಚುಕ್ಕಿ ರೋಗ ಕಂಡುಬರುತ್ತದೆ. ರಬ್ಬರ್‌ ಕೃಷಿ ಇರುವ ಕಡೆ ಅಡಿಕೆಯ ಎಲೆಚುಕ್ಕಿ ರೋಗ ಬೇಗನೆ ಹರಡಿದೆ ಎಂದು ರೈತರು ಗಮನಿಸಿದ್ದರು. ಈ ಬಗ್ಗೆ ಭಾರತೀಯ ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌ ಅವರ ಜೊತೆ ಚರ್ಚಿಸಿದ್ದರು. ಈ ಬಗ್ಗೆ ವೈಜ್ಞಾನಿಕ ಸಂಶೋಧನೆ ಸೂಕ್ತ ಎಂದು ರೈತರು ಮಾಹಿತಿ ನೀಡಿದ್ದರು. ಇದಕ್ಕಾಗಿ ಭಾರತೀಯ ರಬ್ಬರ್‌ ಮಂಡಳಿ ಸಭೆಯಲ್ಲಿ ಮುಳಿಯ ಕೇಶವ ಭಟ್‌ ಅವರು ರಬ್ಬರ್‌ ಮಂಡಳಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಎಲೆಚುಕ್ಕಿ ರೋಗ ಹಾಗೂ ಕೊಳೆರೋಗದ ವೈರಸ್‌ ರಬ್ಬರ್‌ ಹಾಗೂ ಅಡಿಕೆಯಲ್ಲಿ  ಸಾಮ್ಯತೆ ಇದೆಯೇ ಎಂಬುದರ ಬಗ್ಗೆ ವಿಜ್ಞಾನಿಗಳು ಸಂಶೋಧನೆ ನಡೆಸಲು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ರಬ್ಬರ್‌ ಬೋರ್ಡ್‌ ಆಡಳಿತ ನಿರ್ದೇಶಕ ವಸಂತಗೇಸನ್ ಹಾಗೂ ಚಯರ್‌ಮೆನ್‌ ಡಾ.ಸಾವರ್‌ ದನಾನಿಯಾ ಹಾಗೂ ಇತರ ಅಧಿಕಾರಿಗಳು ಈ ಬಗ್ಗೆ ಅಧ್ಯಯನಕ್ಕೆ ಉತ್ಸಾಹ ತೋರಿದ್ದಾರೆ.

ಮುಳಿಯ ಕೇಶವ ಭಟ್

ಉತ್ತರ ಕೇರಳ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಪ್ರದೇಶದ ಕೃಷಿಕರು ಮುಖ್ಯವಾಗಿ ಅಡಿಕೆ ಮತ್ತು ರಬ್ಬರ್  ಬೆಳೆಯುತ್ತಾರೆ. ಅಡಿಕೆಯಲ್ಲಿ ಪ್ರಮುಖವಾಗಿ ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳಲ್ಲಿ ಕೊಳೆರೋಗ ಒಂದು. ಇದನ್ನು  ನಿಯಂತ್ರಿಸಲು ಬೋರ್ಡೋ ಸ್ಪ್ರೇ ಅನ್ನು ಶಿಫಾರಸು ಮಾಡಲಾಗಿದೆ.

ಆದರೆ ಕೆಲವು ವರ್ಷಗಳಿಂದ, ಅಡಿಕೆಯಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದೆ. ಈ ರೋಗದಿಂದ  ತಕ್ಷಣವೇ ಅಡಿಕೆ ಮರಗಳೂ ಸಾಯುತ್ತಿರುವುದು  ಕಂಡುಬಂದಿದೆ. ಇದರ ಜೊತೆಗೆ ಹಳದಿ ಎಲೆರೋಗ ಕೂಡಾ ಇನ್ನೊಂದು ಸಮಸ್ಯೆಯಾಗಿದೆ. ಇದಕ್ಕೆ ಯಾವುದೇ ಪರಿಹಾರವಿಲ್ಲ.

ಎಲೆಚುಕ್ಕಿ ರೋಗ ಮತ್ತು ಕೊಳೆರೋಗ ಎರಡೂ ಕೂಡಾ ರಬ್ಬರ್‌ ಹಾಗೂ ಅಡಿಕೆ ತೋಟದಲ್ಲಿ ಸಾಮಾನ್ಯವಾಗಿದೆ ಎಂಬುದು ಗಮನಾರ್ಹವಾದ ಅಂಶವಾಗಿದೆ. ಹೀಗಾಗಿ ಈಗ  ಈ ವೈರಸ್‌ಗಳು ಪರಸ್ಪರ ಸಂಪರ್ಕ ಹೊಂದಿವೆಯೇ?,  ಇವುಗಳನ್ನು ಸೃಷ್ಟಿಸುವ ಶಿಲೀಂಧ್ರ/ಬ್ಯಾಕ್ಟೀರಿಯಾ/ವೈರಸ್ ಒಂದೇ ರೀತಿಯ ಅಥವಾ ಸಾಮಾನ್ಯವೇ?,  ಸಮಸ್ಯೆಗಳು ರಬ್ಬರ್ ಮತ್ತು ಅಡಿಕೆ ಎರಡರಲ್ಲೂ ಕಂಡುಬರುವುದರಿಂದ, ಇದು ರಬ್ಬರ್ ತೋಟದಿಂದ ಅಡಿಕೆಗೆ ಹರಡುತ್ತದೆಯೇ ? ಎಂಬ ಪ್ರಶ್ನೆಗಳು ಇವೆ.  ಇದಕ್ಕಾಗಿ ವೈಜ್ಞಾನಿಕ ಸಂಶೋಧನೆಯ ಅಗತ್ಯ ಇದೆ ಎಂದು ಮುಳಿಯ ಕೇಶವ ಭಟ್‌ ಅವರು ಹೇಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago