Advertisement
ಸುದ್ದಿಗಳು

ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |

Share

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳು” ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ಮೇ.23 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕೃಷಿ ಕಾಲೇಜ್, ನವಿಲೆ ಇದರ ಎಂ. ಎಸ್. ಸ್ವಾಮಿನಾಥನ್ ಸಭಾಂಗಣ (ಎಂ. ಪಿ ಹಾಲ್)ದಲ್ಲಿ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.

ಡಾ. ಎಸ್. ಪ್ರದೀಪ್ , ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು, ಡಾ. ಆರ್. ಸಿ. ಜಗದೀಶ, ಕುಲಪತಿಗಳು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ ಶಿವಮೊಗ್ಗ ಇವರು ಅಧ್ಯಕ್ಷತೆವಹಿಸುವ ಈ ಕಾರ್ಯಕ್ರಮವನ್ನು ಡಾ. ಪ್ರಕಾಶ್ ಜಿ.ಎನ್.,ತೋಟಗಾರಿಕೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಡಾ. ಬಿ. ಹೇಮ್ಲಾನಾಯ್ಕ, ಶಿಕ್ಷಣ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ ಇವರುಗಳು ಭಾಗವಹಿಸುವರು.

ಡಾ. ದುಷ್ಯಂತ ಕುಮಾರ್ ಬಿ.ಎಂ., ಸಂಶೋಧನಾ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಕೆ.ಟಿ. ಗುರುಮೂರ್ತಿ, ವಿಸ್ತರಣಾ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಆರ್. ಗಣೇಶ್ ನಾಯಕ್, ಡೀನ್ (ಕೃಷಿ) ಮತ್ತು ಆವರಣದ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಡಾ. ಜೆ. ವೆಂಕಟೇಶ್, ವಿಶ್ರಾಂತ ಶಿಕ್ಷಣ ನಿರ್ದೇಶಕರು, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ ತಾಂತ್ರಿಕ ಉಪನ್ಯಾಸವನ್ನು ವಿಶ್ರಾಂತ ಶಿಕ್ಷಣ ನಿರ್ದೇಶಕರು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಡಾ. ನಾಗರಾಜಪ್ಪ ಅಡಿವೆಪ್ಪರ್, డా. గిరివో ఆరో, ಮುಖ್ಯಸ್ಥರು, ಉಡಿತ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ, ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಕೆವಿಕೆ, ಶಿವಮೊಗ್ಗ ಇವರುಗಳು ನಡೆಸಿಕೊಡುವರು.

ರೈತರ ಸಂವಾದ ಮತ್ತು ಅನುಭವಗಳು ಹಾಗೂ ವಂದನಾರ್ಪಣೆಯನ್ನು ಡಾ. ಭರತ್ ಕುಮಾರ್ ಎಂ.ವಿ., ವಿಜ್ಞಾನಿಗಳು (ತೋಟಗಾರಿಕೆ), ಕೆವಿಕೆ, ಶಿವಮೊಗ್ಗ ಇವರು ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago