ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ

March 27, 2026
6:45 AM
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ವರ್ಷಪೂರ್ತಿ ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸಿ, ವರ್ಷಪೂರ್ತಿ ಖರೀದಿ ವ್ಯವಸ್ಥೆಯನ್ನು ಜಾರಿಗೊಳಿಸಿದರೆ ಮಾತ್ರ ರೈತರಿಗೆ ನಿಜವಾದ ನ್ಯಾಯ ಸಿಗಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಆವರ್ತ ನಿಧಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಎಲ್ಲಾ ಎಪಿಎಂಸಿ (APMC) ಮಾರುಕಟ್ಟೆಗಳಲ್ಲಿ ವರ್ಷಪೂರ್ತಿ ನಿರಂತರವಾಗಿ ಕಾರ್ಯನಿರ್ವಹಿಸುವ ಖರೀದಿ ಕೇಂದ್ರಗಳನ್ನು ಆರಂಭಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅವರು ಎಂ. ಎಸ್. ಸ್ವಾಮಿನಾಥನ್ ಆಯೋಗದ ವರದಿಯನ್ನು ಪ್ರಸ್ತಾಪಿಸಿದರು. ರೈತರ ಉತ್ಪಾದನಾ ವೆಚ್ಚಕ್ಕೆ ಕನಿಷ್ಠ 50% ಲಾಭ ಸೇರಿಸಿ MSP ನಿಗದಿಪಡಿಸಬೇಕು ಎಂಬ ಶಿಫಾರಸು ಬಂದಿದ್ದು, ಅದಕ್ಕೆ ಈಗಾಗಲೇ ಸುಮಾರು 26 ವರ್ಷಗಳಾಗಿದ್ದರೂ, ಇದುವರೆಗೂ ಯಾವುದೇ ಸರ್ಕಾರಗಳು ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಂದಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರವನ್ನು ಉಳಿಸಲು ಹಾಗೂ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಈ ಶಿಫಾರಸುಗಳ ಅನುಷ್ಠಾನ ಅತ್ಯಗತ್ಯವಾಗಿದೆ. ಸರ್ಕಾರಗಳು ಕೂಡಲೇ ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Farmer leader Kodihalli Chandrashekar has urged the government to implement a scientifically determined Minimum Support Price (MSP) and establish year-round procurement centers across APMC markets. He emphasized the need to implement the Swaminathan Commission recommendation of providing at least 50% profit over production cost to ensure farmers’ economic stability.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror