Advertisement
The Rural Mirror ವಾರದ ವಿಶೇಷ

ಮಲೆನಾಡು ಗಿಡ್ಡ ಗೋತಳಿ | ವೈಜ್ಞಾನಿಕ ಅಧ್ಯಯನ ಕೇಳಿದರೆ ಅಚ್ಚರಿಯಾಗುತ್ತದೆ…! | ಮಲೆನಾಡು ಗಿಡ್ಡ ತಳಿಯ ಹಾಲು ಬರೀ ಹಾಲಲ್ಲ… ಅದು ಅಮೃತ…! |

Share

ಈಗ ಎಲ್ಲೆಡೆಯೂ ದೇಸೀ ಗೋತಳಿ ಸಂರಕ್ಷಣೆ, ಅಭಿವೃದ್ಧಿಯ ಮಾತುಗಳು. ಅದರ ವೈಜ್ಞಾನಿಕ ಅಧ್ಯಯನಗಳನ್ನು ತಿಳಿದುಕೊಂಡರೆ ಈ ಗೋವನ್ನು ಸಾಕದೇ ಇರಲಾರರು. ಪ್ರತೀ ಮನೆಗೊಂದು ಗೋವು ಸಾಕುವುದು ಕಷ್ಟವೂ ಆಗದು. ಮಲೆನಾಡು ಗಿಡ್ಡ ತಳಿಯ ಗೋವಿನ ಹಾಲಿನ ಮಹತ್ವದ ಬಗ್ಗೆ, ಅದರ ವೈಜ್ಞಾನಿಕ ಅಧ್ಯಯನದ ಬಗ್ಗೆ ರಾಷ್ಟ್ರೀಯ ಹೈನುಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ.ಕೆ.ಪಿ ರಮೇಶ್‌ ಅವರು ಮಾಹಿತಿ ನೀಡಿದ್ದಾರೆ.ಅವರು ಹೇಳಿರುವ ಮಾಹಿತಿ ಇಲ್ಲಿದೆ…

ಮಲೆನಾಡು ಗಿಡ್ಡ ತಳಿಯು ಒಂದು ವಿಶಿಷ್ಟವಾದ ತಳಿಯಾಗಿದೆ. ಇದು ಗಾತ್ರದಲ್ಲಿ ಸಣ್ಣದು, ಎತ್ತರವೂ ಅಷ್ಟೇನಿಲ್ಲ.ತೂಕವೂ ಇಲ್ಲ. ಇಲ್ಲಿನ  ಭೌಗೋಳಿಕ ವಾತಾವರಣಕ್ಕೆ ಈ ಹಸು ಹೊಂದಿಕೊಂಡು ಇದೆ. ಹೀಗಾಗಿ ಈ ದನದ ಹಾಲು ಸರ್ವಶ್ರೇಷ್ಟವಾಗಿದೆ. ಅತೀ ಮುಖ್ಯವಾಗಿ ಈ ಗೋವಿನ ಹಾಲಿನಲ್ಲಿ ಇರುವ ಲ್ಯಾಕ್ಟೋ ಫೆರಿನ್‌ ಎಂಬ ಅಂಶ ಇದೆ,  ಇದು ಮೆದುಳು ಬೆಳವಣಿಗೆಗೆ ಪ್ರಮುಖವಾದ ಕಾರಣವಾಗುತ್ತದೆ.

ಒಂದು ಎಂಎಲ್‌ ಹಾಲಿನಲ್ಲಿ ಇರುವ ಲ್ಯಾಕ್ಟೋಫೆರಿನ್‌ ಅತ್ಯಂತ ಅಧಿಕ ಇರುವುದು ಕಂಡುಬಂದಿದೆ. ಇದು ವಿದೇಶಿ ತಳಿಯ ಹಸುವಿನ ಹಾಲಿನಲ್ಲೂ ಇರುತ್ತದೆ. ಆದರೆ ಮಲೆನಾಡು ತಳಿಯಲ್ಲಿ ಇದ್ದಷ್ಟು ಇರುವುದಿಲ್ಲ.

ಯಾವತ್ತೂ  ತಾಯಿ ಹಾಲು ಸರ್ವಶ್ರೇಷ್ಟ. ಅದರಲ್ಲಿ ಇರುವ ಲ್ಯಾಕ್ಟೋಫೆರಿನ್‌ ಮಕ್ಕಳ ಮೆದುಳಿನ ಬೆಳವಣಿಗೆಗೆ ಕಾರಣವಾಗುತ್ತದೆ. ಅದು ಬಿಟ್ಟರೆ ಮಲೆನಾಡು ತಳಿಯ ಹಸುವಿನ ಹಾಲಿನಲ್ಲಿ ಅಧಿಕ ಪ್ರಮಾಣದಲ್ಲಿ ಇರುತ್ತದೆ. ಹೀಗಾಗಿ ಈ ಹಾಲು ಸರ್ವಶ್ರೇಷ್ಟವಾಗಿದೆ.

ಯಾವಾಗಲೂ ದೇಸೀ ತಳಿಯ ದನದ ಹಾಲು ಸ್ವಲ್ಪ ಹಳದಿ ಬಣ್ಣದಿಂದ ಇರುತ್ತದೆ. ಇದು ಕೂಡಾ ಮಹತ್ವ ಇದೆ. ಈ ಗುಣವು ಕಣ್ಣಿನ ಆರೋಗ್ಯಕ್ಕೆ ಉತ್ತಮವಾಗಿದೆ. ಈ ಮಲೆನಾಡು ಗಿಡ್ಡ ತಳಿಯ ಹಾಲಿನಲ್ಲಿ ಡಿ3 ವಿಟಮಿನ್ ಸೇರಿದಂತೆ ಸುಮಾರು 12 ಬಗೆಯ ವಿಟಮಿನ್‌ಗಳು ಇರುತ್ತದೆ. 4 ಅಂಶಗಳು ಕೊಬ್ಬಿನಲ್ಲಿ ಕರಗುವ ವಿಟಮಿನ್‌ ಕೂಡಾ ಇದೆ. ಇದೆಲ್ಲಾ ದೇಹಕ್ಕೆ ಅಗತ್ಯವಾಗಿದೆ.

ವಿಶೇಷವಾಗಿ ಮಲಗುವ ಮುನ್ನ ಅನೇಕರು ಹಾಲು ಕುಡಿಯುತ್ತಾರೆ. ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದರಿಂದ ಶಾಂತವಾಗಿ ನಿದ್ರೆ ಬರುತ್ತದೆ. ಇದಕ್ಕೆ ಕಾರಣ ಕ್ರಿಪ್ಟೋಫಯನಾನ್‌ ಎನ್ನುವ ಅಂಶ ಇರುವುದರಿಂದ ದೇಹಕ್ಕೆ ಆರಾಮ ಆಗುತ್ತದೆ, ಅಂದರೆ ಅದರಿಂದ ದೇಹದಲ್ಲಿ ಸ್ಯಾಟಿಟಿ ಎನ್ನುವ ಹಾರ್ಮೋನ್‌ ಬಿಡುಗಡೆಯಾಗಿ  ಶಾಂತವಾಗಿ ನಿದ್ರೆ ಬರಲು ಸಾಧ್ಯವಾಗುತ್ತದೆ.

ಇಷ್ಟೇ ಅಲ್ಲ, ದೇಹದ ನಿಯಂತ್ರಣಕ್ಕೂ ಈ ಹಾಲು ಉತ್ತಮವಾಗಿದೆ.ದೇಸೀ ತಳಿಯ ಹಾಲಿನ  ಬಳಕೆಯಿಂದ ಆರೋಗ್ಯ ಸ್ಥಿರತೆ ಸಾಧ್ಯವಾಗುತ್ತದೆ. ಹಾಲು, ಮೊಸರು, ತುಪ್ಪ ಎಲ್ಲವನ್ನೂ ಮಿತಿಯಲ್ಲಿ ಉಪಯೋಗ ಮಾಡುವುದರಿಂದ  ಆರೋಗ್ಯ ಸುಧಾರಣೆಯಾಗುತ್ತದೆ. ಹೃದಯದ ಆರೋಗ್ಯವೂ ಸುಧಾರಣೆಯಾಗುತ್ತದೆ.  ಹೀಗೆ ಬಳಕೆ ಮಾಡಿದರೆ ಕ್ಯಾಲ್ಸಿಯಂ, ಪೋಷಕಾಂಶಗಳು ಸರಿಯಾಗಿ ದೇಹಕ್ಕೂ ಸಿಗುತ್ತದೆ.ಮಲೆ ನಾಡು ಗಿಡ್ಡ ತಳಿಯ ಹಾಲು  ವಿಶೇಷವಾಗಿ ಮಕ್ಕಳ ಮೆದುಳು ಬೆಳವಣಿಗೆಗೆ , ವಯೋವೃದ್ಧರಿಗೂ ಮೂಳೆ ಗಟ್ಟಿನತಕ್ಕೂ ಇದು ಉತ್ತಮ.

ದೇಸೀ ದನದ ಹಾಲಿನ ಹೊರತಾದ ಇತರ ಹಸುವಿನ ಹಾಲಿನಲ್ಲೂ ಈ ಎಲ್ಲಾ ಅಂಶಗಳೂ ಇದೆ. ಆದರೆ  ಮಲೆನಾಡು ಗಿಡ್ಡ ತಳಿಯ ಹಸುವಿನಲ್ಲಿ ಮಾತ್ರಾ ಹೆಚ್ಚಿದೆ. ಏಕೆಂದರೆ ಈ ಹಸುಗಳು ಕಾಡಿಗೆ ಹೋಗಿ ಮೇಯ್ದು ಬರುವುದರಿಂದ ಮಲೆನಾಡು ಗಿಡ್ಡ ಹಸು ಉತ್ತಮವಾಗಿದೆ. ವಿವಿಧ ಗಿಡಗಳ ಔಷಧಿಯೂ ಸಿಗುತ್ತದೆ. ಹಾಗಾಗಿ ದೇಸೀ ದನವನು ಕಟ್ಟು ಸಾಕುವುದರಿಂದ ಹಾಲಿನ ಕ್ವಾಲಿಟಿ ಕಡಿಮೆಯಾಗುತ್ತದೆ.

ಭಾರತೀಯ ಇತರ ತಳಿಗಳನ್ನು ನಾವು ಸಾಕಬೇಕಾಗಿಲ್ಲ. ದೇಸೀ ತಳಿಗಳು ಆಯಾ ಪ್ರದೇಶಕ್ಕೆ ಅನುಗುಣವಾಗಿ ದೇಹದ ವ್ಯವಸ್ಥೆ ಬದಲಾಯಿಸಿವೆ. ಆಯಾ ವಾತಾವರಣ, ಭೌಗೋಳಿಕ ವ್ಯವಸ್ಥೆಗೆ ಹಸುಗಳು ಬೆಳೆದಿದೆ. ಮಲೆನಾಡು ಭಾಗಕ್ಕೆ ಮಲೆನಾಡು ಗಿಡ್ಡ ತಳಿಯೇ ಸೂಕ್ತ. ಆಯಾಯ ವಾತಾವರಣಕ್ಕೆ ಆಯಾಯ ತಳಿ ಇದೆ. ಅದೇ ಸೂಕ್ತವಾಗಿದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

10 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

19 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

20 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago