Advertisement
MIRROR FOCUS

ತಿಪಟೂರಿನಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು | ವೈಜ್ಞಾನಿಕವಾಗಿ ಕಾಂಪೋಸ್ಟ್ ತಯಾರಿಕೆ

Share

ತುಮಕೂರು ಜಿಲ್ಲೆ ಇದೀಗ ಸ್ವಚ್ಛತೆಯಲ್ಲಿ ಗಮನ ಸೆಳೆಯುತ್ತಿದೆ. ತುಮಕೂರು ಜಿಲ್ಲೆಯ ತಿಪಟೂರು ನಗರಸಭೆ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಿದೆ. ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಯೋಜನೆಯಡಿ ಮತ್ತು ರಾಜ್ಯ ಸರ್ಕಾರ ಹಲವು ಅನುದಾನಗಳ ಸದ್ಬಳಕೆಯಿಂದ ವೈಜ್ಞಾನಿಕವಾಗಿ ತ್ಯಾಜ್ಯ ಸಂಸ್ಕರಣೆ ಮಾಡಲಾಗುತ್ತಿದೆ. ಜೊತೆಗೆ ಕಾರ್ಮಿಕರ ಆರೋಗ್ಯ ಕುರಿತು ಹೆಚ್ಚಿನ ಒತ್ತು ನೀಡಲಾಗಿತ್ತು. ನಿತ್ಯ ಪೌಷ್ಟಿಕ ಆಹಾರ, ಮೂಲಸೌಕರ್ಯಗಳನ್ನು ಒದಗಿಸಲಾಗಿದೆ.

ಇಲ್ಲಿ ಕಾರ್ಮಿಕರು ನಿತ್ಯ ಮುಂಜಾನೆಯೇ ರಸ್ತೆಗಳನ್ನು ಗುಡಿಸಿ, ಮನೆಗಳಿಂದಲೇ ಕಸ ವಿಂಗಡಿಸಿ ಸುಸಜ್ಜಿತವಾಗಿ ಸಂಗ್ರಹಿಸಲಾಗುತ್ತದೆ. ಬಳಿಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲಾಗುತ್ತದೆ. ಹಸಿಕಸ ನಿರ್ವಹಣೆಗಾಗಿ 14 ಎಕರೆ ಪ್ರದೇಶದಲ್ಲಿ ಕಾಂಪೋಸ್ಟ್ ಯಾರ್ಡ್ ತೆರೆದಿದ್ದು, ಯಂತ್ರೋಪಕರಣಗಳ ಮೂಲಕ ವೈಜ್ಞಾನಿಕವಾಗಿ ಕಾಂಪೋಸ್ಟ್ ಮಾಡಲಾಗುತ್ತದೆ. ಇಲ್ಲಿ ತಯಾರಾದ ಗೊಬ್ಬರವನ್ನು ಮಾರಾಟ ಮಾಡಲು ರೈತರಿಗೆ ಸೂಕ್ತ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ನಗರಸಭೆ ಅಧಿಕಾರಿಗಳು ಮನೆಮನೆಗೆ ತೆರಳಿ ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.  ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಡುವುದರ ಜೊತೆಗೆ ಸೊಳ್ಳೆಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾಹಿತಿ ನೀಡಲಾಗುತ್ತಿದೆ.

ನಿತ್ಯ ಹಸಿಕಸ, ಒಣಕಸವನ್ನು ಬೇರ್ಪಡಿಸಿ ನೀಡಲಾಗುತ್ತಿದ್ದು, ಮನೆ ಬಾಗಿಲಿಗೆ ನಗರ ಪಾಲಿಕೆ ವಾಹನ ಬಂದು ತ್ಯಾಜ್ಯ ಸಂಗ್ರಹಿಸುತ್ತಾರೆ. ಇದರಿಂದ ಜನನಿಬಿಡ ಪ್ರದೇಶಗಳನ್ನು ಸ್ವಚ್ಛವಾಗಿಡಲು ಸಹಕಾರಿಯಾಗಿದೆ. ಪೌರಕಾರ್ಮಿಕರು ಎಲ್ಲಾ ರಸ್ತೆಗಳನ್ನು ಸ್ವಚ್ಛಗೊಳಿಸುವುದರಿಂದ ನಗರದ ಸ್ಚಚ್ಛತೆ ಕಾಪಾಡಲು ಸಾಧ್ಯವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವುದು ತಪ್ಪಿದೆ ಎಂದು ಸ್ಥಳೀಯರು ಅಭಿಪ್ರಾಯಪಡುತ್ತಾರೆ.

ಮುಂಜಾನೆ 5 ಗಂಟೆಯಿಂದಲೇ ನಗರದ ಎಲ್ಲಾ ರಸ್ತೆಗಳನ್ನು ಗುಡಿಸಿ ಸ್ವಚ್ಛಗೊಳಿಸಲಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ನಗರ ಪಾಲಿಕೆ ಅಧಿಕಾರಿಗಳು ಸೂಕ್ತ ಪರಿಕರಗಳು, ಉಡುಪು, ನೀಡಿದ್ದು, ಆಹಾರವನ್ನು ನೀಡುತ್ತಿದ್ದಾರೆ ಎಂದು ಪೌರಕಾರ್ಮಿಕ ಶ್ರೀನಿವಾಸ ಮೂರ್ತಿ ಹೇಳುತ್ತಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಹಣಕಾಸಿನ ನೆರವನ್ನು ಸದ್ಬಳಕೆ ಮಾಡಿಕೊಂಡು ಯಶಸ್ವಿಯಾಗಿ ತ್ಯಾಜ್ಯ ವಿಲೇವಾರಿ ಮಾಡುವುದರ ಜೊತೆಗೆ ಪೌರಕಾರ್ಮಿಕರ ಆರೋಗ್ಯಕ್ಕೂ ಒತ್ತು ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷರಾದ ಯಮುನಾ ಹೇಳುತ್ತಾರೆ.

ತಿಪಟೂರು ನಗರದ 31 ವಾರ್ಡ್ ಗಳಲ್ಲಿ ಸ್ವಚ್ಛತೆಗಾಗಿ 100 ಪೌರಕಾರ್ಮಿಕರು ಶ್ರಮಿಸುತ್ತಿದ್ದು, ನಿತ್ಯ 25 ಟನ್ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ ಎಂದು ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡಿ ವಿವರಿಸುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

15 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

15 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

15 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

22 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago