Advertisement
MIRROR FOCUS

ತಿಪಟೂರಿನಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು | ವೈಜ್ಞಾನಿಕವಾಗಿ ಕಾಂಪೋಸ್ಟ್ ತಯಾರಿಕೆ

Share

ತುಮಕೂರು ಜಿಲ್ಲೆ ಇದೀಗ ಸ್ವಚ್ಛತೆಯಲ್ಲಿ ಗಮನ ಸೆಳೆಯುತ್ತಿದೆ. ತುಮಕೂರು ಜಿಲ್ಲೆಯ ತಿಪಟೂರು ನಗರಸಭೆ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಿದೆ. ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಯೋಜನೆಯಡಿ ಮತ್ತು ರಾಜ್ಯ ಸರ್ಕಾರ ಹಲವು ಅನುದಾನಗಳ ಸದ್ಬಳಕೆಯಿಂದ ವೈಜ್ಞಾನಿಕವಾಗಿ ತ್ಯಾಜ್ಯ ಸಂಸ್ಕರಣೆ ಮಾಡಲಾಗುತ್ತಿದೆ. ಜೊತೆಗೆ ಕಾರ್ಮಿಕರ ಆರೋಗ್ಯ ಕುರಿತು ಹೆಚ್ಚಿನ ಒತ್ತು ನೀಡಲಾಗಿತ್ತು. ನಿತ್ಯ ಪೌಷ್ಟಿಕ ಆಹಾರ, ಮೂಲಸೌಕರ್ಯಗಳನ್ನು ಒದಗಿಸಲಾಗಿದೆ.

Advertisement

ಇಲ್ಲಿ ಕಾರ್ಮಿಕರು ನಿತ್ಯ ಮುಂಜಾನೆಯೇ ರಸ್ತೆಗಳನ್ನು ಗುಡಿಸಿ, ಮನೆಗಳಿಂದಲೇ ಕಸ ವಿಂಗಡಿಸಿ ಸುಸಜ್ಜಿತವಾಗಿ ಸಂಗ್ರಹಿಸಲಾಗುತ್ತದೆ. ಬಳಿಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲಾಗುತ್ತದೆ. ಹಸಿಕಸ ನಿರ್ವಹಣೆಗಾಗಿ 14 ಎಕರೆ ಪ್ರದೇಶದಲ್ಲಿ ಕಾಂಪೋಸ್ಟ್ ಯಾರ್ಡ್ ತೆರೆದಿದ್ದು, ಯಂತ್ರೋಪಕರಣಗಳ ಮೂಲಕ ವೈಜ್ಞಾನಿಕವಾಗಿ ಕಾಂಪೋಸ್ಟ್ ಮಾಡಲಾಗುತ್ತದೆ. ಇಲ್ಲಿ ತಯಾರಾದ ಗೊಬ್ಬರವನ್ನು ಮಾರಾಟ ಮಾಡಲು ರೈತರಿಗೆ ಸೂಕ್ತ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ನಗರಸಭೆ ಅಧಿಕಾರಿಗಳು ಮನೆಮನೆಗೆ ತೆರಳಿ ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.  ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಡುವುದರ ಜೊತೆಗೆ ಸೊಳ್ಳೆಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾಹಿತಿ ನೀಡಲಾಗುತ್ತಿದೆ.

ನಿತ್ಯ ಹಸಿಕಸ, ಒಣಕಸವನ್ನು ಬೇರ್ಪಡಿಸಿ ನೀಡಲಾಗುತ್ತಿದ್ದು, ಮನೆ ಬಾಗಿಲಿಗೆ ನಗರ ಪಾಲಿಕೆ ವಾಹನ ಬಂದು ತ್ಯಾಜ್ಯ ಸಂಗ್ರಹಿಸುತ್ತಾರೆ. ಇದರಿಂದ ಜನನಿಬಿಡ ಪ್ರದೇಶಗಳನ್ನು ಸ್ವಚ್ಛವಾಗಿಡಲು ಸಹಕಾರಿಯಾಗಿದೆ. ಪೌರಕಾರ್ಮಿಕರು ಎಲ್ಲಾ ರಸ್ತೆಗಳನ್ನು ಸ್ವಚ್ಛಗೊಳಿಸುವುದರಿಂದ ನಗರದ ಸ್ಚಚ್ಛತೆ ಕಾಪಾಡಲು ಸಾಧ್ಯವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವುದು ತಪ್ಪಿದೆ ಎಂದು ಸ್ಥಳೀಯರು ಅಭಿಪ್ರಾಯಪಡುತ್ತಾರೆ.

ಮುಂಜಾನೆ 5 ಗಂಟೆಯಿಂದಲೇ ನಗರದ ಎಲ್ಲಾ ರಸ್ತೆಗಳನ್ನು ಗುಡಿಸಿ ಸ್ವಚ್ಛಗೊಳಿಸಲಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ನಗರ ಪಾಲಿಕೆ ಅಧಿಕಾರಿಗಳು ಸೂಕ್ತ ಪರಿಕರಗಳು, ಉಡುಪು, ನೀಡಿದ್ದು, ಆಹಾರವನ್ನು ನೀಡುತ್ತಿದ್ದಾರೆ ಎಂದು ಪೌರಕಾರ್ಮಿಕ ಶ್ರೀನಿವಾಸ ಮೂರ್ತಿ ಹೇಳುತ್ತಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಹಣಕಾಸಿನ ನೆರವನ್ನು ಸದ್ಬಳಕೆ ಮಾಡಿಕೊಂಡು ಯಶಸ್ವಿಯಾಗಿ ತ್ಯಾಜ್ಯ ವಿಲೇವಾರಿ ಮಾಡುವುದರ ಜೊತೆಗೆ ಪೌರಕಾರ್ಮಿಕರ ಆರೋಗ್ಯಕ್ಕೂ ಒತ್ತು ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷರಾದ ಯಮುನಾ ಹೇಳುತ್ತಾರೆ.

ತಿಪಟೂರು ನಗರದ 31 ವಾರ್ಡ್ ಗಳಲ್ಲಿ ಸ್ವಚ್ಛತೆಗಾಗಿ 100 ಪೌರಕಾರ್ಮಿಕರು ಶ್ರಮಿಸುತ್ತಿದ್ದು, ನಿತ್ಯ 25 ಟನ್ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ ಎಂದು ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡಿ ವಿವರಿಸುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

7 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago