Advertisement
MIRROR FOCUS

ಇನ್ನು ದೇಶದಲ್ಲಿ ಈರುಳ್ಳಿ ಕೊರತೆ ಇರಲ್ಲ| ಎರಡೂ ಹಂಗಾಮಿನಲ್ಲಿ ಬೆಳೆಯ 93 ಹೊಸ ತಳಿಯ ಬೀಜ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು |

Share

ಮಾರುಕಟ್ಟೆಯಲ್ಲಿ(Market) ಒಂದಲ್ಲ ಒಂದು ದಿನ ಬಳಕೆ ವಸ್ತು ಅಥವಾ ತರಕಾರಿಗಳ(Vegetable) ಬೆಲೆ ಏರುತ್ತಲೇ(Price hike) ಇರುತ್ತದೆ. ಯಾವಾಗ ಒಂದು ಬೆಳೆದ ಬೆಳೆ ಉತ್ಪಾದನೆ(Production) ಕಡಿಮೆಯಾಗಿ ಬೇಡಿಕೆ(demand) ಜಾಸ್ತಿಯಾಗುತ್ತದೋ ಆಗ ಬೆಲೆ ಏರಿಕೆ ಆರಂಭವಾಗುತ್ತದೆ. ಇದರ ಸಾಲಿನಲ್ಲಿ ಟೊಮೆಟೋ(Tomato), ಈರುಳ್ಳಿ(Onion), ಬೆಳ್ಳಿಳ್ಳಿ(Garlic) ಸರ್ವೆ ಸಾಮಾನ್ಯ. ಹಾಗೆ ಇವು  ದಿನಬಳಕೆಯ ಅಗತ್ಯ ವಸ್ತುಗಳು ಹೌದು. ಇದೀಗ ಈರುಳ್ಳಿ ಸಮಸ್ಯೆಯನ್ನು ನೀಗಿಸಲು ಉತ್ತರಪ್ರದೇಶದ(Uttar Pradesh) ಕಾನ್ಪುರ ವಿವಿಯ(Kanpur University) ವಿಜ್ಞಾನಿಗಳು(Scientist) ಹೊಸ ಉಪಾಯವನ್ನು ಕಂಡು ಹಿಡಿದಿದ್ದಾರೆ. ಇದರಿಂದ ಪ್ರತಿವರ್ಷ ತಲೆದೋರುವ ಈರುಳ್ಳಿ ಕೊರತೆಯನ್ನು ಇಲ್ಲವಾಗಿಸಲು ಮುಂದಾಗಿದ್ದಾರೆ. ಕಾನ್ಪುರದ ಚಂದ್ರಶೇಖರ್ ಆಜಾದ್ ವಿಶ್ವವಿದ್ಯಾಲಯದ ವಿಜ್ಞಾನಿಗಳು 93 ಹೊಸ ತಳಿಯ(New Breed) ಈರುಳ್ಳಿ ಬೀಜಗಳನ್ನು(Onion seed) ಅಭಿವೃದ್ಧಿಪಡಿಸಿದ್ದಾರೆ.

ಇವುಗಳಲ್ಲಿ ವಿವಿಧ ಜಾತಿಯ ಕೆಂಪು ಮತ್ತು ಬಿಳಿ ಈರುಳ್ಳಿಯ ಬೀಜಗಳೂ ಇವೆ. ಇವುಗಳನ್ನು ಸರ್ವಕಾಲಕ್ಕೂ ಬೆಳೆಯಬಹುದಾಗಿದ್ದು, ದೇಶದಲ್ಲಿ ಪ್ರತಿ ವರ್ಷ ಎದುರಾಗುವ ಈರುಳ್ಳಿ ಕೊರತೆ ನೀಗಿಸಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಈ ಬೀಜಗಳನ್ನು ದೇಶಾದ್ಯಂತ ಎಲ್ಲ ರೈತರಿಗೆ ಒದಗಿಸಲಾಗುವುದು, ಎರಡೂ ಹಂಗಾಮಿನಲ್ಲಿ (ರಬಿ ಮತ್ತು ಖಾರಿಫ್) ಇವನ್ನು ಬೆಳೆಯಬಹುದು ಎಂದು ಹೇಳಿದ್ದಾರೆ. ದೇಶದಲ್ಲಿ ದೊಡ್ಡ ರಾಜ್ಯಗಳಲ್ಲಿ ಒಂದಾದ ಉತ್ತರ ಪ್ರದೇಶದಲ್ಲಿ ಈರುಳ್ಳಿ ಬೆಳೆಯುವುದು ತೀರಾ ಕಡಿಮೆಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಹೊಸ ಈರುಳ್ಳಿ ತಳಿಗಳನ್ನು ಶೋಧಿಸಲಾಗಿದೆ. ಮಹಾರಾಷ್ಟ್ರ, ಗುಜರಾತ್, ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಖಾರಿಫ್ ಋತುವಿನಲ್ಲಿ ಈರುಳ್ಳಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಆದರೆ, ಯುಪಿಯಲ್ಲಿ ಅದು ನಿರೀಕ್ಷಿತ ಪ್ರಮಾಣದಲ್ಲಿ ಬೆಳೆಯುತ್ತಿಲ್ಲ. ಪ್ರತಿ ವರ್ಷ ಇದೇ ಕಾರಣಕ್ಕಾಗಿ ಅಕ್ಟೋಬರ್- ನವೆಂಬರ್​ನಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ ಎಂದು ಹಿರಿಯ ವಿಜ್ಞಾನಿ ಡಾ.ರಾಮ್ ಬಟುಕ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಅಭಿವೃದ್ಧಿಪಡಿಸಿದ್ದು ಹೀಗೆ:ಅಭಿವೃದ್ಧಿಪಡಿಸಲಾದ 93 ಬಗೆಯ ಈರುಳ್ಳಿ ಬೀಜಗಳನ್ನು ವಿಜ್ಞಾನಿಗಳು ರಬಿ ಋತುವಿನ ಫೆಬ್ರವರಿ – ಮಾರ್ಚ್‌ನಲ್ಲಿ ಬಿತ್ತನೆ ಮಾಡಿದರು. ಬೆಳೆ ಕೇವಲ 25 ದಿನಗಳಲ್ಲಿ ಕಟಾವಿಗೆ ಬಂದವು. ಅದರಂತೆ ಅಕ್ಟೋಬರ್- ನವೆಂಬರ್​ನಲ್ಲೂ ನೆಟ್ಟು ಪ್ರಯೋಗ ನಡೆಸಿದರು. ಉತ್ತಮ ಬೆಳೆ ಬಂದ ಹಿನ್ನೆಲೆಯಲ್ಲಿ ರೈತರು ಎರಡೂ ಹಂಗಾಮಿನಲ್ಲಿ ಬೆಳೆಯಬಹುದು ಎಂದು ವಿಜ್ಞಾನಿಗಳು ಕಂಡುಕೊಂಡರು. ಹೊಸದಾಗಿ ಅಭಿವೃದ್ಧಿಪಡಿಸಿದ ಪ್ರಭೇದಗಳ ಬೀಜಗಳು ಪ್ರತಿ ಋತುವಿಗೂ ಸೂಕ್ತವಾಗಿವೆ. ಕೀಟಗಳು ಮತ್ತು ರೋಗ ನಿರೋಧಕ ಶಕ್ತಿಯೂ ಹೆಚ್ಚಿದೆ ಎಂದು ತಿಳಿಸಿದ್ದಾರೆ.

ಹೊಸ ತಳಿಯ 1 ಕಿಲೋ ಬೀಜದ ಬೆಲೆ ಎಷ್ಟು?: ಈರುಳ್ಳಿ ಮತ್ತು ಬೆಳ್ಳುಳ್ಳಿ ಸಂಶೋಧನಾ ನಿರ್ದೇಶನಾಲಯದ ವೆಬ್‌ಸೈಟ್‌ನಲ್ಲಿ ರೈತರು ಈ ಹೊಸ ಈರುಳ್ಳಿ ತಳಿಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದು. ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಇವುಗಳನ್ನು ಪಡೆಯಬಹುದು. ಆನ್‌ಲೈನ್‌ನಲ್ಲಿ ಪಾವತಿ ಮಾಡಿದ ನಂತರ, ಬೀಜಗಳನ್ನು ಸಂಬಂಧಪಟ್ಟ ರೈತರ ವಿಳಾಸಕ್ಕೆ ಕಳುಹಿಸಲಾಗುತ್ತದೆ. ಹೊಸ ಈರುಳ್ಳಿ ತಳಿಯ ಬೀಜದ ಬೆಲೆ ಪ್ರಸ್ತುತ ಕೆಜಿಗೆ 2,500 ರಿಂದ 3,500 ರೂಪಾಯಿ ಇದೆ. ಇದೇ ವೇಳೆ, ಭಾರತದಲ್ಲಿ ಪ್ರತಿ ವರ್ಷ 26,738 ಮೆಟ್ರಿಕ್ ಟನ್ ಈರುಳ್ಳಿ ಉತ್ಪಾದನೆಯಾಗುತ್ತದೆ.

Source : Agriculture Post

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

9 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago