Advertisement
ರಾಷ್ಟ್ರೀಯ

scrub typhus | ದೇಶದಲ್ಲೀಗ ಕೊರೋನಾ ನಂತರ “ಸ್ಕ್ರಬ್ ಟೈಫಸ್” ತಲೆಬಿಸಿ..! |

Share

ಕಳೆದ ಮೂರು ವರ್ಷಗಳಿಂದ ಕೊರೋನಾ ಸೇರಿದಂತೆ  ಹಲವಾರು ರೋಗಗಳಿಂದ ಜನತೆ ಕಂಗಲಾಗಿದ್ದಾರೆ.ಈಗ ಚಿಂತೆ ಮಾಡಿರುವುದು ಸ್ಕ್ರಬ್ ಟೈಫಸ್ ಎಂದು ಕರೆಯಲ್ಪಡುವ ಜ್ವರ. ಮನುಷ್ಯ, ಮತ್ತು ದನಕರುಗಳಲ್ಲಿ ಕೂಡ ವಿಚಿತ್ರ ರೋಗಗಳು ಕಂಡು ಬಂದಿದ್ದು, ಎಲ್ಲರನ್ನೂ ಕಾಡುತ್ತಿವೆ.ತಿರುಚನಾಪಳ್ಳಿಯಲ್ಲಿ ಈ ಜ್ವರ ಈ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಲೆಬಿಸಿ ಮಾಡಿದೆ. ಸದ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಆದರೂ ಇದನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳುತ್ತಾರೆ.

ಈ ಜ್ವರ ದೀರ್ಘಕಾಲದವರೆಗೆ ಮುಂದುವರಿದರೆ. ಇದು ಬಹು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ. ಸಾಮಾನ್ಯವಾಗಿ ಪರ್ವತ ಪ್ರದೇಶಗಳಲ್ಲಿ ಕಂಡುಬರುತ್ತವೆ. ಈ ಜ್ವರದಿಂದ ಬಳಲುತ್ತಿರುವ ಜನರನ್ನು ದೆಹಲಿಯಲ್ಲಿ ಗುರುತಿಸಲಾಗಿದೆ. ಕೀಟಾಣು ಕಡಿತದಿಂದ ಗೋಚರಿಸುವ ಚಿಹ್ನೆ ಅಥವಾ ಕಲೆಗಳನ್ನು ಎಚ್ಚರಿಕೆಯ ಸಂಕೇತ ಎಂದು ಹೇಳಲಾಗುತ್ತದೆ. ಸ್ಕ್ರಬ್ ಟೈಪಸ್ ಒಂದು ವಿಶಿಷ್ಟ ಕಾಯಿಲೆಯಾಗಿದೆ. ಸ್ಕ್ರಬ್ ಟೈಫಸ್ ನ ರೋಗಲಕ್ಷಣಗಳು ಡೆಂಗ್ಯೂವಿನಂತಿದ್ದು, ಇದರಿಂದ ಬಳಲುತ್ತಿರುವ ರೋಗಿಯ ದೇಹದ ಮೇಲೆ ಕಲೆಗಳನ್ನು ಕಾಣಬಹುದಾಗಿದೆ. ಈ ಜ್ವರ ಬಾಧೆಯಿಂದ ಜೀರ್ಣಕ್ರಿಯೆ ಸಮಸ್ಯೆಗಳು ಹೆಚ್ಚಾಗುತ್ತವೆ.  ಜ್ವರವು ಸಾಮಾನ್ಯವಾಗಿ ಏಳು ದಿನಗಳವರೆಗೆ ಇರುತ್ತದೆ. ಕೆಲವು ರೋಗಿಗಳಲ್ಲಿ ಉಸಿರಾಟದ ತೊಂದರೆಯಿಂದಾಗಿ ಬಹು-ಅಂಗಾಂಗ ವೈಫಲ್ಯ ಸಂಭವಿಸುವ ಸಾಧ್ಯತೆಯಿದೆ ಎನ್ನುವುದು  ವೈದ್ಯರ ಎಚ್ಚರಿಕೆಗಳು.

ಸ್ಕ್ರಬ್ ಟೈಫಸ್ ಅನ್ನು ಬುಷ್ ಟೈಫಸ್ ಎಂದೂ ಕರೆಯುತ್ತಾರೆ, ಇದು  ಬ್ಯಾಕ್ಟೀರಿಯಾದಿಂದ ಉಂಟಾಗುವ ಕಾಯಿಲೆಯಾಗಿದೆ. ಸ್ಕ್ರಬ್ ಟೈಫಸ್ ಸೋಂಕಿತ ಲಾರ್ವಾ ಹುಳಗಳು ಕಡಿತದ ಮೂಲಕ ಜನರಿಗೆ ಹರಡುತ್ತದೆ. ಸ್ಕ್ರಬ್ ಟೈಫಸ್‌ನ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ತಲೆನೋವು, ದೇಹದ ನೋವು.

ಜನವರಿಯಿಂದ ಸುಮಾರು 10 ಸ್ಕ್ರಬ್ ಟೈಫಸ್ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ತಿರುಚನಾಪಳ್ಳಿಯ ಮಹಾತ್ಮಾ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲವು ತಿಂಗಳ ಹಿಂದೆ ಜ್ವರ ರೋಗಿಗಳ ವಿಶೇಷ ತಪಾಸಣೆಯ ಸಂದರ್ಭದಲ್ಲಿ ಐದು ಪ್ರಕರಣಗಳು ಪತ್ತೆಯಾದ ನಂತರ ಈ ರೋಗವು ಗಮನ ಸೆಳೆಯಿತು. ಹಿರಿಯ ಅಧಿಕಾರಿಗಳ ಪ್ರಕಾರ, ಜನವರಿಯಿಂದ ಸುಮಾರು 10 ಸ್ಕ್ರಬ್ ಟೈಫಸ್ ಪ್ರಕರಣಗಳು ವರದಿಯಾಗಿದ್ದು, ರೋಗದ ಲಕ್ಷಣಗಳನ್ನು ಹೊಂದಿರುವ ಆರು ರೋಗಿಗಳು ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

22 hours ago