Advertisement
ರಾಷ್ಟ್ರೀಯ

scrub typhus | ದೇಶದಲ್ಲೀಗ ಕೊರೋನಾ ನಂತರ “ಸ್ಕ್ರಬ್ ಟೈಫಸ್” ತಲೆಬಿಸಿ..! |

Share

ಕಳೆದ ಮೂರು ವರ್ಷಗಳಿಂದ ಕೊರೋನಾ ಸೇರಿದಂತೆ  ಹಲವಾರು ರೋಗಗಳಿಂದ ಜನತೆ ಕಂಗಲಾಗಿದ್ದಾರೆ.ಈಗ ಚಿಂತೆ ಮಾಡಿರುವುದು ಸ್ಕ್ರಬ್ ಟೈಫಸ್ ಎಂದು ಕರೆಯಲ್ಪಡುವ ಜ್ವರ. ಮನುಷ್ಯ, ಮತ್ತು ದನಕರುಗಳಲ್ಲಿ ಕೂಡ ವಿಚಿತ್ರ ರೋಗಗಳು ಕಂಡು ಬಂದಿದ್ದು, ಎಲ್ಲರನ್ನೂ ಕಾಡುತ್ತಿವೆ.ತಿರುಚನಾಪಳ್ಳಿಯಲ್ಲಿ ಈ ಜ್ವರ ಈ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಲೆಬಿಸಿ ಮಾಡಿದೆ. ಸದ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಆದರೂ ಇದನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳುತ್ತಾರೆ.

Advertisement
Advertisement

ಈ ಜ್ವರ ದೀರ್ಘಕಾಲದವರೆಗೆ ಮುಂದುವರಿದರೆ. ಇದು ಬಹು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ. ಸಾಮಾನ್ಯವಾಗಿ ಪರ್ವತ ಪ್ರದೇಶಗಳಲ್ಲಿ ಕಂಡುಬರುತ್ತವೆ. ಈ ಜ್ವರದಿಂದ ಬಳಲುತ್ತಿರುವ ಜನರನ್ನು ದೆಹಲಿಯಲ್ಲಿ ಗುರುತಿಸಲಾಗಿದೆ. ಕೀಟಾಣು ಕಡಿತದಿಂದ ಗೋಚರಿಸುವ ಚಿಹ್ನೆ ಅಥವಾ ಕಲೆಗಳನ್ನು ಎಚ್ಚರಿಕೆಯ ಸಂಕೇತ ಎಂದು ಹೇಳಲಾಗುತ್ತದೆ. ಸ್ಕ್ರಬ್ ಟೈಪಸ್ ಒಂದು ವಿಶಿಷ್ಟ ಕಾಯಿಲೆಯಾಗಿದೆ. ಸ್ಕ್ರಬ್ ಟೈಫಸ್ ನ ರೋಗಲಕ್ಷಣಗಳು ಡೆಂಗ್ಯೂವಿನಂತಿದ್ದು, ಇದರಿಂದ ಬಳಲುತ್ತಿರುವ ರೋಗಿಯ ದೇಹದ ಮೇಲೆ ಕಲೆಗಳನ್ನು ಕಾಣಬಹುದಾಗಿದೆ. ಈ ಜ್ವರ ಬಾಧೆಯಿಂದ ಜೀರ್ಣಕ್ರಿಯೆ ಸಮಸ್ಯೆಗಳು ಹೆಚ್ಚಾಗುತ್ತವೆ.  ಜ್ವರವು ಸಾಮಾನ್ಯವಾಗಿ ಏಳು ದಿನಗಳವರೆಗೆ ಇರುತ್ತದೆ. ಕೆಲವು ರೋಗಿಗಳಲ್ಲಿ ಉಸಿರಾಟದ ತೊಂದರೆಯಿಂದಾಗಿ ಬಹು-ಅಂಗಾಂಗ ವೈಫಲ್ಯ ಸಂಭವಿಸುವ ಸಾಧ್ಯತೆಯಿದೆ ಎನ್ನುವುದು  ವೈದ್ಯರ ಎಚ್ಚರಿಕೆಗಳು.

Advertisement

ಸ್ಕ್ರಬ್ ಟೈಫಸ್ ಅನ್ನು ಬುಷ್ ಟೈಫಸ್ ಎಂದೂ ಕರೆಯುತ್ತಾರೆ, ಇದು  ಬ್ಯಾಕ್ಟೀರಿಯಾದಿಂದ ಉಂಟಾಗುವ ಕಾಯಿಲೆಯಾಗಿದೆ. ಸ್ಕ್ರಬ್ ಟೈಫಸ್ ಸೋಂಕಿತ ಲಾರ್ವಾ ಹುಳಗಳು ಕಡಿತದ ಮೂಲಕ ಜನರಿಗೆ ಹರಡುತ್ತದೆ. ಸ್ಕ್ರಬ್ ಟೈಫಸ್‌ನ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ತಲೆನೋವು, ದೇಹದ ನೋವು.

ಜನವರಿಯಿಂದ ಸುಮಾರು 10 ಸ್ಕ್ರಬ್ ಟೈಫಸ್ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ತಿರುಚನಾಪಳ್ಳಿಯ ಮಹಾತ್ಮಾ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲವು ತಿಂಗಳ ಹಿಂದೆ ಜ್ವರ ರೋಗಿಗಳ ವಿಶೇಷ ತಪಾಸಣೆಯ ಸಂದರ್ಭದಲ್ಲಿ ಐದು ಪ್ರಕರಣಗಳು ಪತ್ತೆಯಾದ ನಂತರ ಈ ರೋಗವು ಗಮನ ಸೆಳೆಯಿತು. ಹಿರಿಯ ಅಧಿಕಾರಿಗಳ ಪ್ರಕಾರ, ಜನವರಿಯಿಂದ ಸುಮಾರು 10 ಸ್ಕ್ರಬ್ ಟೈಫಸ್ ಪ್ರಕರಣಗಳು ವರದಿಯಾಗಿದ್ದು, ರೋಗದ ಲಕ್ಷಣಗಳನ್ನು ಹೊಂದಿರುವ ಆರು ರೋಗಿಗಳು ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

13 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

13 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

18 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

18 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

19 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

20 hours ago