Advertisement
ಪ್ರಮುಖ

#Seaerosion | ಪ್ರತಿ ಮಳೆಗಾಲದಲ್ಲೂ ಕಾಡುವ ಕಡಲ್ಕೊರೆತ ಸಮಸ್ಯೆ | ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ

Share

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಅಬ್ಬರಿಸಿ ಬೊಬ್ಬರಿಯಬೇಕಾದ ಕಾಲ ಇದು. ಆದರೆ ಒಂದು ತಿಂಗಳ ನಂತರ ತನ್ನ ವೇಗ ಪಡೆದುಕೊಂಡ ಮುಂಗಾರು ಮಳೆ ಕರಾವಳಿ, ಮಲೆನಾಡಿನಲ್ಲಿ ಕೇವಲ ಒಂದು ವಾರ ಅಬ್ಬರಿಸಿದೆ. ಈಗ ಮಳೆಯ ಅಬ್ಬರವೇನೋ ನಿಂತಿದೆ. ಆದರೆ ಅದರ ಪರಿಣಾಮ ಇನ್ನೂ ನಿಂತಂತೆ ಕಾಣುತ್ತಿಲ್ಲ. ಜಿಲ್ಲೆಯ ಬೈಕಂಪಾಡಿ, ಮೀನಕಳಿ ಹಾಗೂ ಇನ್ನಿತರ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಇದರಿಂದ ಆಟದ ಮೈದಾನ, ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ. ಈ ಬಗ್ಗೆ ದಕ್ಷಿಣಕನ್ನಡ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ದಿನೇಶ್ ಕುಮಾರ್ ಮಾತನಾಡಿ ರಾಜ್ಯ 320 ಕಿಮೀ ಉದ್ದದ ಕಡಲ ತೀರವನ್ನು ಹೊಂದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಮಂಗಳೂರಿನಲ್ಲಿ‌ ಅನುಷ್ಠಾನ ಮಾಡಿದ್ದೇವೆ. ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿ ಭೂಮಿ ಸಮುದ್ರದ ಪಾಲಾಗುತ್ತಿದೆ. ಪ್ರಕೃತಿಯ ರೌದ್ರಾವತಾರವನ್ನು ತಣಿಸೋದು ಪ್ರಕೃತಿಗೆ ಮಾತ್ರ ಸಾಧ್ಯ ಎಂದು ಹೇಳಿದರು.

ಎಲ್ಲೆಲ್ಲಿ ಪ್ರಾಕೃತಿಕವಾಗಿ ಗಿಡ, ಮರಗಳು ಬೆಳೆದುಕೊಂಡಿದೆಯೋ ಅಂತಹ ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸುತ್ತಿಲ್ಲ. ಎಲ್ಲೆಲ್ಲಿ ಮರ, ಗಿಡಗಳನ್ನು ನಾಶಮಾಡಿ ಮನೆ, ರಸ್ತೆ ನಿರ್ಮಾಣವಾಗಿದೆ ಅಲ್ಲಿ ಮಾತ್ರ ಕಡಲ್ಕೊರೆತ ಉಂಟಾಗಿದೆ. ಹೀಗಾಗಿ ಈ ಪ್ರಾಕೃತಿಕ ರಕ್ಷಾ ಕವಚ ಕಡಲ್ಕೊರೆತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನೈಸರ್ಗಿಕವಾಗಿ ಬೆಳೆದಿರುವ ರಕ್ಷಾ ಕವಚ ಇರುವಲ್ಲಿಯೂ ಕೊರೆತ ಉಂಟಾಗಲ್ಲ. ಸಮುದ್ರದ ಪಕ್ಕವೇ ಭೂ ಪ್ರದೇಶ ಇದ್ದರೂ ಕಡಲ್ಕೊರೆತ ಉಂಟಾಗಿಲ್ಲ ಎಂದು ತಿಳಿಸಿದರು.

ಈ ಬಗ್ಗೆ ಅಧ್ಯಯನ ನಡೆಸಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಕರಾವಳಿಯ ಬೇರೆ ಭಾಗಕ್ಕೂ ಇದನ್ನು ವಿಸ್ತರಣೆ ಮಾಡಬಹುದು. ಕಡಲ್ಕೊರೆತ ತಡೆಯುವ ಜೊತೆ ಹಸಿರು ಪರಿಸರವು ನಿರ್ಮಾಣ ಆಗುತ್ತೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 hour ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago