ಪ್ರಮುಖ

#Seaerosion | ಪ್ರತಿ ಮಳೆಗಾಲದಲ್ಲೂ ಕಾಡುವ ಕಡಲ್ಕೊರೆತ ಸಮಸ್ಯೆ | ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಅಬ್ಬರಿಸಿ ಬೊಬ್ಬರಿಯಬೇಕಾದ ಕಾಲ ಇದು. ಆದರೆ ಒಂದು ತಿಂಗಳ ನಂತರ ತನ್ನ ವೇಗ ಪಡೆದುಕೊಂಡ ಮುಂಗಾರು ಮಳೆ ಕರಾವಳಿ, ಮಲೆನಾಡಿನಲ್ಲಿ ಕೇವಲ ಒಂದು ವಾರ ಅಬ್ಬರಿಸಿದೆ. ಈಗ ಮಳೆಯ ಅಬ್ಬರವೇನೋ ನಿಂತಿದೆ. ಆದರೆ ಅದರ ಪರಿಣಾಮ ಇನ್ನೂ ನಿಂತಂತೆ ಕಾಣುತ್ತಿಲ್ಲ. ಜಿಲ್ಲೆಯ ಬೈಕಂಪಾಡಿ, ಮೀನಕಳಿ ಹಾಗೂ ಇನ್ನಿತರ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

Advertisement
Advertisement

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಇದರಿಂದ ಆಟದ ಮೈದಾನ, ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ. ಈ ಬಗ್ಗೆ ದಕ್ಷಿಣಕನ್ನಡ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ದಿನೇಶ್ ಕುಮಾರ್ ಮಾತನಾಡಿ ರಾಜ್ಯ 320 ಕಿಮೀ ಉದ್ದದ ಕಡಲ ತೀರವನ್ನು ಹೊಂದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಮಂಗಳೂರಿನಲ್ಲಿ‌ ಅನುಷ್ಠಾನ ಮಾಡಿದ್ದೇವೆ. ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿ ಭೂಮಿ ಸಮುದ್ರದ ಪಾಲಾಗುತ್ತಿದೆ. ಪ್ರಕೃತಿಯ ರೌದ್ರಾವತಾರವನ್ನು ತಣಿಸೋದು ಪ್ರಕೃತಿಗೆ ಮಾತ್ರ ಸಾಧ್ಯ ಎಂದು ಹೇಳಿದರು.

ಎಲ್ಲೆಲ್ಲಿ ಪ್ರಾಕೃತಿಕವಾಗಿ ಗಿಡ, ಮರಗಳು ಬೆಳೆದುಕೊಂಡಿದೆಯೋ ಅಂತಹ ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸುತ್ತಿಲ್ಲ. ಎಲ್ಲೆಲ್ಲಿ ಮರ, ಗಿಡಗಳನ್ನು ನಾಶಮಾಡಿ ಮನೆ, ರಸ್ತೆ ನಿರ್ಮಾಣವಾಗಿದೆ ಅಲ್ಲಿ ಮಾತ್ರ ಕಡಲ್ಕೊರೆತ ಉಂಟಾಗಿದೆ. ಹೀಗಾಗಿ ಈ ಪ್ರಾಕೃತಿಕ ರಕ್ಷಾ ಕವಚ ಕಡಲ್ಕೊರೆತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನೈಸರ್ಗಿಕವಾಗಿ ಬೆಳೆದಿರುವ ರಕ್ಷಾ ಕವಚ ಇರುವಲ್ಲಿಯೂ ಕೊರೆತ ಉಂಟಾಗಲ್ಲ. ಸಮುದ್ರದ ಪಕ್ಕವೇ ಭೂ ಪ್ರದೇಶ ಇದ್ದರೂ ಕಡಲ್ಕೊರೆತ ಉಂಟಾಗಿಲ್ಲ ಎಂದು ತಿಳಿಸಿದರು.

ಈ ಬಗ್ಗೆ ಅಧ್ಯಯನ ನಡೆಸಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಕರಾವಳಿಯ ಬೇರೆ ಭಾಗಕ್ಕೂ ಇದನ್ನು ವಿಸ್ತರಣೆ ಮಾಡಬಹುದು. ಕಡಲ್ಕೊರೆತ ತಡೆಯುವ ಜೊತೆ ಹಸಿರು ಪರಿಸರವು ನಿರ್ಮಾಣ ಆಗುತ್ತೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

8 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

8 hours ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

8 hours ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

8 hours ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

19 hours ago