Advertisement
ಪ್ರಮುಖ

#Seaerosion | ಪ್ರತಿ ಮಳೆಗಾಲದಲ್ಲೂ ಕಾಡುವ ಕಡಲ್ಕೊರೆತ ಸಮಸ್ಯೆ | ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ

Share

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಅಬ್ಬರಿಸಿ ಬೊಬ್ಬರಿಯಬೇಕಾದ ಕಾಲ ಇದು. ಆದರೆ ಒಂದು ತಿಂಗಳ ನಂತರ ತನ್ನ ವೇಗ ಪಡೆದುಕೊಂಡ ಮುಂಗಾರು ಮಳೆ ಕರಾವಳಿ, ಮಲೆನಾಡಿನಲ್ಲಿ ಕೇವಲ ಒಂದು ವಾರ ಅಬ್ಬರಿಸಿದೆ. ಈಗ ಮಳೆಯ ಅಬ್ಬರವೇನೋ ನಿಂತಿದೆ. ಆದರೆ ಅದರ ಪರಿಣಾಮ ಇನ್ನೂ ನಿಂತಂತೆ ಕಾಣುತ್ತಿಲ್ಲ. ಜಿಲ್ಲೆಯ ಬೈಕಂಪಾಡಿ, ಮೀನಕಳಿ ಹಾಗೂ ಇನ್ನಿತರ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಇದರಿಂದ ಆಟದ ಮೈದಾನ, ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ. ಈ ಬಗ್ಗೆ ದಕ್ಷಿಣಕನ್ನಡ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ದಿನೇಶ್ ಕುಮಾರ್ ಮಾತನಾಡಿ ರಾಜ್ಯ 320 ಕಿಮೀ ಉದ್ದದ ಕಡಲ ತೀರವನ್ನು ಹೊಂದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಮಂಗಳೂರಿನಲ್ಲಿ‌ ಅನುಷ್ಠಾನ ಮಾಡಿದ್ದೇವೆ. ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿ ಭೂಮಿ ಸಮುದ್ರದ ಪಾಲಾಗುತ್ತಿದೆ. ಪ್ರಕೃತಿಯ ರೌದ್ರಾವತಾರವನ್ನು ತಣಿಸೋದು ಪ್ರಕೃತಿಗೆ ಮಾತ್ರ ಸಾಧ್ಯ ಎಂದು ಹೇಳಿದರು.

ಎಲ್ಲೆಲ್ಲಿ ಪ್ರಾಕೃತಿಕವಾಗಿ ಗಿಡ, ಮರಗಳು ಬೆಳೆದುಕೊಂಡಿದೆಯೋ ಅಂತಹ ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸುತ್ತಿಲ್ಲ. ಎಲ್ಲೆಲ್ಲಿ ಮರ, ಗಿಡಗಳನ್ನು ನಾಶಮಾಡಿ ಮನೆ, ರಸ್ತೆ ನಿರ್ಮಾಣವಾಗಿದೆ ಅಲ್ಲಿ ಮಾತ್ರ ಕಡಲ್ಕೊರೆತ ಉಂಟಾಗಿದೆ. ಹೀಗಾಗಿ ಈ ಪ್ರಾಕೃತಿಕ ರಕ್ಷಾ ಕವಚ ಕಡಲ್ಕೊರೆತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನೈಸರ್ಗಿಕವಾಗಿ ಬೆಳೆದಿರುವ ರಕ್ಷಾ ಕವಚ ಇರುವಲ್ಲಿಯೂ ಕೊರೆತ ಉಂಟಾಗಲ್ಲ. ಸಮುದ್ರದ ಪಕ್ಕವೇ ಭೂ ಪ್ರದೇಶ ಇದ್ದರೂ ಕಡಲ್ಕೊರೆತ ಉಂಟಾಗಿಲ್ಲ ಎಂದು ತಿಳಿಸಿದರು.

ಈ ಬಗ್ಗೆ ಅಧ್ಯಯನ ನಡೆಸಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಕರಾವಳಿಯ ಬೇರೆ ಭಾಗಕ್ಕೂ ಇದನ್ನು ವಿಸ್ತರಣೆ ಮಾಡಬಹುದು. ಕಡಲ್ಕೊರೆತ ತಡೆಯುವ ಜೊತೆ ಹಸಿರು ಪರಿಸರವು ನಿರ್ಮಾಣ ಆಗುತ್ತೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago