ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಅಬ್ಬರಿಸಿ ಬೊಬ್ಬರಿಯಬೇಕಾದ ಕಾಲ ಇದು. ಆದರೆ ಒಂದು ತಿಂಗಳ ನಂತರ ತನ್ನ ವೇಗ ಪಡೆದುಕೊಂಡ ಮುಂಗಾರು ಮಳೆ ಕರಾವಳಿ, ಮಲೆನಾಡಿನಲ್ಲಿ ಕೇವಲ ಒಂದು ವಾರ ಅಬ್ಬರಿಸಿದೆ. ಈಗ ಮಳೆಯ ಅಬ್ಬರವೇನೋ ನಿಂತಿದೆ. ಆದರೆ ಅದರ ಪರಿಣಾಮ ಇನ್ನೂ ನಿಂತಂತೆ ಕಾಣುತ್ತಿಲ್ಲ. ಜಿಲ್ಲೆಯ ಬೈಕಂಪಾಡಿ, ಮೀನಕಳಿ ಹಾಗೂ ಇನ್ನಿತರ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ. ಇದರಿಂದ ಆಟದ ಮೈದಾನ, ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ. ಈ ಬಗ್ಗೆ ದಕ್ಷಿಣಕನ್ನಡ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ದಿನೇಶ್ ಕುಮಾರ್ ಮಾತನಾಡಿ ರಾಜ್ಯ 320 ಕಿಮೀ ಉದ್ದದ ಕಡಲ ತೀರವನ್ನು ಹೊಂದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಮಂಗಳೂರಿನಲ್ಲಿ ಅನುಷ್ಠಾನ ಮಾಡಿದ್ದೇವೆ. ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿ ಭೂಮಿ ಸಮುದ್ರದ ಪಾಲಾಗುತ್ತಿದೆ. ಪ್ರಕೃತಿಯ ರೌದ್ರಾವತಾರವನ್ನು ತಣಿಸೋದು ಪ್ರಕೃತಿಗೆ ಮಾತ್ರ ಸಾಧ್ಯ ಎಂದು ಹೇಳಿದರು.
ಎಲ್ಲೆಲ್ಲಿ ಪ್ರಾಕೃತಿಕವಾಗಿ ಗಿಡ, ಮರಗಳು ಬೆಳೆದುಕೊಂಡಿದೆಯೋ ಅಂತಹ ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸುತ್ತಿಲ್ಲ. ಎಲ್ಲೆಲ್ಲಿ ಮರ, ಗಿಡಗಳನ್ನು ನಾಶಮಾಡಿ ಮನೆ, ರಸ್ತೆ ನಿರ್ಮಾಣವಾಗಿದೆ ಅಲ್ಲಿ ಮಾತ್ರ ಕಡಲ್ಕೊರೆತ ಉಂಟಾಗಿದೆ. ಹೀಗಾಗಿ ಈ ಪ್ರಾಕೃತಿಕ ರಕ್ಷಾ ಕವಚ ಕಡಲ್ಕೊರೆತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನೈಸರ್ಗಿಕವಾಗಿ ಬೆಳೆದಿರುವ ರಕ್ಷಾ ಕವಚ ಇರುವಲ್ಲಿಯೂ ಕೊರೆತ ಉಂಟಾಗಲ್ಲ. ಸಮುದ್ರದ ಪಕ್ಕವೇ ಭೂ ಪ್ರದೇಶ ಇದ್ದರೂ ಕಡಲ್ಕೊರೆತ ಉಂಟಾಗಿಲ್ಲ ಎಂದು ತಿಳಿಸಿದರು.
ಈ ಬಗ್ಗೆ ಅಧ್ಯಯನ ನಡೆಸಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಕರಾವಳಿಯ ಬೇರೆ ಭಾಗಕ್ಕೂ ಇದನ್ನು ವಿಸ್ತರಣೆ ಮಾಡಬಹುದು. ಕಡಲ್ಕೊರೆತ ತಡೆಯುವ ಜೊತೆ ಹಸಿರು ಪರಿಸರವು ನಿರ್ಮಾಣ ಆಗುತ್ತೆ ಎಂದರು.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…