ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ನೀರು ಪಾಲಾದ ಯುವಕ | ಸತತ ಕಾರ್ಯಾಚರಣೆಯ ಬಳಿಕವೂ ಪತ್ತೆಯಾಗದ ಸುಳಿವು | ಬಡವರ ಮಕ್ಕಳೆಂದರೆ ಅಷ್ಟೂ ನಿರ್ಲಕ್ಷ್ಯವೇ…? ಯುವಕನ ಮಿತ್ರರ ಪ್ರಶ್ನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ದಿನದ ಕಾರ್ಯಾಚರಣೆಯಲ್ಲೂ ಯಾವುದೇ ಸುಳಿವು ಸಿಕ್ಕಿಲ್ಲ. ಬೆಳಗ್ಗೆ ಏಳು ಗಂಟೆಯಿಂದ ಸಂಜೆಯವರೆಗೂ ಕಾರ್ಯಾಚರಣೆ ನಡೆದಿದೆ. ಸಂಜೆಯ ಬಳಿಕ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಇದೀಗ ಯುವಕನ ಮಿತ್ರರು ಹಾಗೂ ಪೋಷಕರು ಆಡಳಿತ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಜನರಷ್ಟೂ ಕೂಡಾ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದಾರೆ.

Advertisement
Advertisement

ಪ್ರವಾಸಿಗರಾಗಿ ಬಂದಿದ್ದ ಬೆಂಗಳೂರಿನ ದೀಪಾಂಜಲಿ ನಗರದ ಸ್ವಾಮಿ ಎಂಬ ಯುವಕ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆ ಇಳಿದ ಬಳಿಕ ನಾಪತ್ತೆಯಾಗಿದ್ದರು. ಮೂರು ದಿನವಾದರೂ ಯುವಕ ಪತ್ತೆಯಾಗಿಲ್ಲ. ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ, ಮಂಗಳವಾರ ಇಡೀ ದಿನ ಸ್ಥಳೀಯ ಮುಳುಗು ತಜ್ಞರ ಸಹಾಯದಿಂದ ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳ ಸಹಾಯದೊಂದಿಗೆ ಹುಡುಕಾಟ ನಡೆಸಲಾಗಿದೆ. ಇದುವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಸುಮಾರು 15 ಜನ ನುರಿತ ಈಜುಗಾರರು, ಅಗ್ನಿಶಾಮಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ,ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಥಳೀಯರು ನೆರವು ನೀಡಿದ್ದಾರೆ. ಆದರೆ ಇಲಾಖೆಗಳ ಅಧಿಕಾರಿಗಳಿಂದ ಸೂಕ್ತ ರೀತಿಯಲ್ಲಿ ಸ್ಪಂದನೆ ದೊರೆಯುತ್ತಿಲ್ಲ ಎಂದು ಯುವಕನ ಮಿತ್ರರು ಹಾಗೂ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳು, ಆಡಳಿತವು ಸೂಕ್ತ ರೀತಿಯ ವ್ಯವಸ್ಥೆ ಮಾಡುತ್ತಿಲ್ಲ. ಸ್ಥಳೀಯ ಜನರಷ್ಟು ಕೂಡಾ ಸಹಾಯ ಮಾಡುತ್ತಿಲ್ಲ. ಬಡವರು ಎಂದರೆ ಅಷ್ಟೊಂದು ನಿರ್ಲಕ್ಷ್ಯವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ದೊಡ್ಡವರ ಮಕ್ಕಳಾದರೆ ಹೀಗೆ ಮಾಡುತ್ತಿದ್ದರೇ? ಯಾವುದೇ ವ್ಯವಸ್ಥೆಗಳಿಲ್ಲದೆ ಅಗ್ನಿಶಾಮಕ ದಳ, ಇಲಾಖೆಗಳು ಹೇಗೆ ಕೆಲಸ ಮಾಡುವುದು ಎಂದೂ ಅವರು ಪ್ರಶ್ನೆ ಮಾಡಿದ್ದಾರೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

13 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

14 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

14 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

15 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

15 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

15 hours ago