Advertisement
ಸುದ್ದಿಗಳು

ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ಯುವಕ ನಾಪತ್ತೆ ಪ್ರಕರಣ | ಪತ್ತೆಯಾಗದ ಯುವಕ | ಎರಡನೇ ದಿನದ ಕಾರ್ಯಾಚರಣೆ ಸ್ಥಗಿತ |

Share

ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ದಿನವೂ ಶೋಧ ಕಾರ್ಯ ಸಂಜೆಯವರೆಗೆ ನಡೆದಿದೆ. ಸಂಜೆಯ ಬಳಿಕ ಕಾರ್ಯಾಚರಣೆ ಸ್ಥಗಿತವಾಗಿದೆ.

ಪ್ರವಾಸಿಗರಾಗಿ ಬಂದಿದ್ದ ಬೆಂಗಳೂರಿನ ದೀಪಾಂಜಲಿ ನಗರದ ಶಿವು ಎಂಬ ಯುವಕ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆ ಇಳಿದ ಬಳಿಕ ನಾಪತ್ತೆಯಾಗಿದ್ದ. ಎರಡು ದಿನವಾದರೂ ಯುವಕ ಪತ್ತೆಯಾಗಿಲ್ಲ. ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಇಡೀ ದಿನ ಮುಳುಗು ತಜ್ಞರ ಸಹಾಯದಿಂದ ಹುಡುಕಾಟ ನಡೆಸಲಾಗಿದೆ. ಆದರೆ ಸಂಜೆಯ ವೇಳೆ ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಹಾಗೂ ನೀರಿನ ಬಣ್ಣ ಕಂದು ಬಣ್ಣಕ್ಕೆ ತಿರುಗಿದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಸುಮಾರು 15 ಜನ ನುರಿತ ಈಜುಗಾರರು, ಅಗ್ನಿಶಮಾಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಸತತವಾಗಿ 12 ಗಂಟೆಗಳ ಕಾರ್ಯಾಚರಣೆ ನಡೆಸಿದರು. ಸಂಜೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಮಂಗಳವಾರ ಮತ್ತೆ ಹುಡುಕಾಟ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago