ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ದಿನವೂ ಶೋಧ ಕಾರ್ಯ ಸಂಜೆಯವರೆಗೆ ನಡೆದಿದೆ. ಸಂಜೆಯ ಬಳಿಕ ಕಾರ್ಯಾಚರಣೆ ಸ್ಥಗಿತವಾಗಿದೆ.
ಪ್ರವಾಸಿಗರಾಗಿ ಬಂದಿದ್ದ ಬೆಂಗಳೂರಿನ ದೀಪಾಂಜಲಿ ನಗರದ ಶಿವು ಎಂಬ ಯುವಕ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆ ಇಳಿದ ಬಳಿಕ ನಾಪತ್ತೆಯಾಗಿದ್ದ. ಎರಡು ದಿನವಾದರೂ ಯುವಕ ಪತ್ತೆಯಾಗಿಲ್ಲ. ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಇಡೀ ದಿನ ಮುಳುಗು ತಜ್ಞರ ಸಹಾಯದಿಂದ ಹುಡುಕಾಟ ನಡೆಸಲಾಗಿದೆ. ಆದರೆ ಸಂಜೆಯ ವೇಳೆ ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಹಾಗೂ ನೀರಿನ ಬಣ್ಣ ಕಂದು ಬಣ್ಣಕ್ಕೆ ತಿರುಗಿದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಸುಮಾರು 15 ಜನ ನುರಿತ ಈಜುಗಾರರು, ಅಗ್ನಿಶಮಾಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಸತತವಾಗಿ 12 ಗಂಟೆಗಳ ಕಾರ್ಯಾಚರಣೆ ನಡೆಸಿದರು. ಸಂಜೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಮಂಗಳವಾರ ಮತ್ತೆ ಹುಡುಕಾಟ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…