ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ದಿನವೂ ಶೋಧ ಕಾರ್ಯ ಸಂಜೆಯವರೆಗೆ ನಡೆದಿದೆ. ಸಂಜೆಯ ಬಳಿಕ ಕಾರ್ಯಾಚರಣೆ ಸ್ಥಗಿತವಾಗಿದೆ.
ಪ್ರವಾಸಿಗರಾಗಿ ಬಂದಿದ್ದ ಬೆಂಗಳೂರಿನ ದೀಪಾಂಜಲಿ ನಗರದ ಶಿವು ಎಂಬ ಯುವಕ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆ ಇಳಿದ ಬಳಿಕ ನಾಪತ್ತೆಯಾಗಿದ್ದ. ಎರಡು ದಿನವಾದರೂ ಯುವಕ ಪತ್ತೆಯಾಗಿಲ್ಲ. ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಇಡೀ ದಿನ ಮುಳುಗು ತಜ್ಞರ ಸಹಾಯದಿಂದ ಹುಡುಕಾಟ ನಡೆಸಲಾಗಿದೆ. ಆದರೆ ಸಂಜೆಯ ವೇಳೆ ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಹಾಗೂ ನೀರಿನ ಬಣ್ಣ ಕಂದು ಬಣ್ಣಕ್ಕೆ ತಿರುಗಿದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಸುಮಾರು 15 ಜನ ನುರಿತ ಈಜುಗಾರರು, ಅಗ್ನಿಶಮಾಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಸತತವಾಗಿ 12 ಗಂಟೆಗಳ ಕಾರ್ಯಾಚರಣೆ ನಡೆಸಿದರು. ಸಂಜೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಮಂಗಳವಾರ ಮತ್ತೆ ಹುಡುಕಾಟ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…