ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ದಿನವೂ ಶೋಧ ಕಾರ್ಯ ಸಂಜೆಯವರೆಗೆ ನಡೆದಿದೆ. ಸಂಜೆಯ ಬಳಿಕ ಕಾರ್ಯಾಚರಣೆ ಸ್ಥಗಿತವಾಗಿದೆ.
ಪ್ರವಾಸಿಗರಾಗಿ ಬಂದಿದ್ದ ಬೆಂಗಳೂರಿನ ದೀಪಾಂಜಲಿ ನಗರದ ಶಿವು ಎಂಬ ಯುವಕ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆ ಇಳಿದ ಬಳಿಕ ನಾಪತ್ತೆಯಾಗಿದ್ದ. ಎರಡು ದಿನವಾದರೂ ಯುವಕ ಪತ್ತೆಯಾಗಿಲ್ಲ. ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಇಡೀ ದಿನ ಮುಳುಗು ತಜ್ಞರ ಸಹಾಯದಿಂದ ಹುಡುಕಾಟ ನಡೆಸಲಾಗಿದೆ. ಆದರೆ ಸಂಜೆಯ ವೇಳೆ ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಹಾಗೂ ನೀರಿನ ಬಣ್ಣ ಕಂದು ಬಣ್ಣಕ್ಕೆ ತಿರುಗಿದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಸುಮಾರು 15 ಜನ ನುರಿತ ಈಜುಗಾರರು, ಅಗ್ನಿಶಮಾಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಸತತವಾಗಿ 12 ಗಂಟೆಗಳ ಕಾರ್ಯಾಚರಣೆ ನಡೆಸಿದರು. ಸಂಜೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಮಂಗಳವಾರ ಮತ್ತೆ ಹುಡುಕಾಟ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…