ದ್ವಿತೀಯ ಪಿಯುಸಿ ಪರೀಕ್ಷೆ|‌ ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ| ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ |

March 4, 2023
9:45 AM

ಇದೀಗ ಮಕ್ಕಳಿಗೆ ಪರೀಕ್ಷಾ ಸಮಯ. ಹಾಗಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಕೆಲವು ಮಕ್ಕಳಿಗೆ ವಿದ್ಯಾಸಂಸ್ಥೆಯ ಬಸ್ ವ್ಯವಸ್ಥೆ ಇರುತ್ತದೆ. ಆದರೆ ಹಳ್ಳಿಯಿಂದ, ಅಥವಾ ದೂರದ ಊರಿಂದ ಬರುವ ಮಕ್ಕಳಿಗೆ ಸರಿಯಾದ ವಾಹನ ವ್ಯವಸ್ಥೆ ಇರೋದಿಲ್ಲ. ಅಂತಹ ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶುಭ ಸುದ್ದಿ ನೀಡಿದೆ.

ಪರೀಕ್ಷೆ ಬರೆಯಲು  ತೆರಳುವ ವಿದ್ಯಾರ್ಥಿಗಳು ಉಚಿತವಾಗಿ KSRTC ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ. ಅಲ್ಲದೆ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಈ ಬಸ್​​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror