Advertisement
ಸುದ್ದಿಗಳು

ದ್ವಿತೀಯ ಪಿಯುಸಿ ಪರೀಕ್ಷೆ|‌ ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ| ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ |

Share

ಇದೀಗ ಮಕ್ಕಳಿಗೆ ಪರೀಕ್ಷಾ ಸಮಯ. ಹಾಗಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಕೆಲವು ಮಕ್ಕಳಿಗೆ ವಿದ್ಯಾಸಂಸ್ಥೆಯ ಬಸ್ ವ್ಯವಸ್ಥೆ ಇರುತ್ತದೆ. ಆದರೆ ಹಳ್ಳಿಯಿಂದ, ಅಥವಾ ದೂರದ ಊರಿಂದ ಬರುವ ಮಕ್ಕಳಿಗೆ ಸರಿಯಾದ ವಾಹನ ವ್ಯವಸ್ಥೆ ಇರೋದಿಲ್ಲ. ಅಂತಹ ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶುಭ ಸುದ್ದಿ ನೀಡಿದೆ.

ಪರೀಕ್ಷೆ ಬರೆಯಲು  ತೆರಳುವ ವಿದ್ಯಾರ್ಥಿಗಳು ಉಚಿತವಾಗಿ KSRTC ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ. ಅಲ್ಲದೆ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಈ ಬಸ್​​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

22 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago