ಇದೀಗ ಮಕ್ಕಳಿಗೆ ಪರೀಕ್ಷಾ ಸಮಯ. ಹಾಗಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಕೆಲವು ಮಕ್ಕಳಿಗೆ ವಿದ್ಯಾಸಂಸ್ಥೆಯ ಬಸ್ ವ್ಯವಸ್ಥೆ ಇರುತ್ತದೆ. ಆದರೆ ಹಳ್ಳಿಯಿಂದ, ಅಥವಾ ದೂರದ ಊರಿಂದ ಬರುವ ಮಕ್ಕಳಿಗೆ ಸರಿಯಾದ ವಾಹನ ವ್ಯವಸ್ಥೆ ಇರೋದಿಲ್ಲ. ಅಂತಹ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶುಭ ಸುದ್ದಿ ನೀಡಿದೆ.
ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ KSRTC ಬಸ್ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಬಹುದಾಗಿದೆ. ಅಲ್ಲದೆ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್ಆರ್ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್ಆರ್ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.
ಈ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು
ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…