Advertisement
MIRROR FOCUS

ನಕಲಿ ಬೀಜಗಳಿಗೆ ಬ್ರೇಕ್‌ | ‘ಸೀಡ್‌ ಆಕ್ಟ್‌–2026’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Share

ರೈತರಿಗೆ ಗುಣಮಟ್ಟದ ಬೀಜಗಳ ಭರವಸೆ ನೀಡುವ ಹಾಗೂ ನಕಲಿ ಬೀಜ ಮಾರುಕಟ್ಟೆಗೆ ಕಡಿವಾಣ ಹಾಕುವ ಉದ್ದೇಶದಿಂದ ಸೀಡ್‌ ಆಕ್ಟ್‌–2026ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಮಾಹಿತಿ ನೀಡಿದ್ದಾರೆ.

ಹೊಸ ಕಾಯ್ದೆಯ ಮೂಲಕ ದೇಶದಲ್ಲಿ ಬೀಜ ಉತ್ಪಾದನೆ, ಮಾರಾಟ ಹಾಗೂ ವಿತರಣಾ ವ್ಯವಸ್ಥೆಗೆ ಕಟ್ಟುನಿಟ್ಟಿನ ನಿಯಮಗಳನ್ನು ತರಲಾಗಿದ್ದು, ರೈತರ ಹಿತ ರಕ್ಷಣೆಗೆ ಒತ್ತು ನೀಡಲಾಗಿದೆ.

ಪ್ರಮುಖ ಅಂಶಗಳು

🔹 QR ಕೋಡ್ ವ್ಯವಸ್ಥೆ:  ಮುಂದೆ ಎಲ್ಲಾ ಬೀಜ ಪ್ಯಾಕೆಟ್‌ಗಳ ಮೇಲೆ QR ಕೋಡ್ ಕಡ್ಡಾಯ. ಇದರಿಂದ ಬೀಜದ ಮೂಲ, ಉತ್ಪಾದಕ ಸಂಸ್ಥೆ ಮತ್ತು ಮಾರಾಟಗಾರರ ವಿವರಗಳನ್ನು ರೈತರು ಸುಲಭವಾಗಿ ಪರಿಶೀಲಿಸಬಹುದು.

🔹 ಬೀಜ ಕಂಪನಿಗಳಿಗೆ ನೋಂದಣಿ ಕಡ್ಡಾಯ:  ನೋಂದಣಿ ಇಲ್ಲದೇ ಯಾವುದೇ ಕಂಪನಿಗೆ ಅಥವಾ ಡೀಲರ್‌ಗೆ ಬೀಜ ಮಾರಾಟಕ್ಕೆ ಅವಕಾಶ ಇರುವುದಿಲ್ಲ.

🔹 ಪಾರಂಪರಿಕ ಬೀಜಗಳ ಬಳಕೆ ಮುಂದುವರಿಕೆ: ರೈತರು ತಮ್ಮದೇ ಪಾರಂಪರಿಕ ಬೀಜಗಳನ್ನು ಬಳಸಲು, ಸಂಗ್ರಹಿಸಿಡಲು ಅಥವಾ ಇತರ ರೈತರಿಗೆ ಹಂಚಿಕೊಳ್ಳಲು ಯಾವುದೇ ನಿರ್ಬಂಧ ಇರುವುದಿಲ್ಲ.

🔹 ನಕಲಿ ಬೀಜ ಮಾರಾಟಕ್ಕೆ ಕಠಿಣ ಶಿಕ್ಷೆ: ಉಪಮಟ್ಟದ ಅಥವಾ ನಕಲಿ ಬೀಜ ಮಾರಾಟ ಮಾಡಿದವರಿಗೆ ₹30 ಲಕ್ಷವರೆಗೆ ದಂಡ ಹಾಗೂ ಗಂಭೀರ ಪ್ರಕರಣಗಳಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ವ್ಯವಸ್ಥೆ ಇದೆ. ಹಿಂದಿನ ಕಾಯ್ದೆಯಲ್ಲಿ ದಂಡ ಮೊತ್ತ ಕೇವಲ ₹500 ಆಗಿತ್ತು.

🔹 ವಿದೇಶಿ ಬೀಜಗಳಿಗೆ ಕಠಿಣ ತಪಾಸಣೆ: ವಿದೇಶಗಳಿಂದ ಆಮದು ಮಾಡುವ ಬೀಜಗಳಿಗೆ ಪರೀಕ್ಷೆ ಮತ್ತು ಮೌಲ್ಯಮಾಪನ ಕಡ್ಡಾಯವಾಗಿರಲಿದೆ.

🔹 ರೈತ ಜಾಗೃತಿ ಅಭಿಯಾನ: ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಕೃಷಿ ವಿಜ್ಞಾನ ಕೇಂದ್ರಗಳು (KVK) ರೈತರಲ್ಲಿ ಜಾಗೃತಿ ಮೂಡಿಸಲಿವೆ.

🔹 ರಾಜ್ಯಗಳ ಅಧಿಕಾರಗಳಿಗೆ ಧಕ್ಕೆಯಾಗದು: ಕೃಷಿ ರಾಜ್ಯ ವಿಷಯವಾಗಿರುವುದರಿಂದ, ರಾಜ್ಯಗಳ ಹಕ್ಕುಗಳನ್ನು ಗೌರವಿಸಿ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ.

ಸರ್ಕಾರದ ಗುರಿ:ರೈತರಿಗೆ ನಂಬಿಕಸ್ಥ, ಪ್ರಮಾಣಿತ ಮತ್ತು ಗುಣಮಟ್ಟದ ಬೀಜಗಳನ್ನು ಒದಗಿಸುವ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು ಮತ್ತು ರೈತರ ಆದಾಯವನ್ನು ಬಲಪಡಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

2 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

14 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago