ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು ಮನೆಗೆ ತುಂಬಿಸಿಕೊಳ್ಳುವ ಸೀಗೆ ಹುಣ್ಣಿಮೆ ಹಬ್ಬವನ್ನು ಬೆಳಗಾವಿಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ದಿನದಂದು ಹುರಿಯಕ್ಕಿ ಹೋಳಿಗೆ, ಕರಿ ಕಡುಬು, ಎಣ್ಣೆ ಹೋಳಿಗೆ, ಸುರಳಿ ಹೋಳಿಗೆ, ಶೇಂಗಾ ಹೋಳಿಗೆ ಹಾಗೂ ಜೋಳ ಮತ್ತು ಸಜ್ಜೆಯ ರೊಟ್ಟಿ ಜೊತೆ ಪುಂಡಿ, ಬದನೆಕಾಯಿ, ಮೆಣಸಿನಕಾಯಿ ಪಲ್ಲೆ ಸೇರಿದಂತೆ ವಿವಿಧ ಬಗೆಯ ಚಟ್ನಿಯನ್ನು ಮಿಶ್ರಣ ಮಾಡಿ ಜಮೀನಿನಲ್ಲಿ ಹಂಚಿ ತಿನ್ನುತ್ತಾರೆ. ತಾವು ಬೆಳೆದ ಬೆಳೆಗೆ ಪೂಜೆ ಸಲ್ಲಿಸಿ ಬಳಿಕ ಕುಟುಂಬಸ್ಥರೆಲ್ಲರೂ ಒಂದೆಡೆ ಸೇರಿ ಊಟ ಮಾಡಿ ಇಡೀ ದಿನ ಹೊಲದಲ್ಲಿ ಕಳೆಯುತ್ತಾರೆ.
ಹೇಗೆ ಗರ್ಭಿಣಿಯರಿಗೆ ಸೀಮಂತ ಮಾಡುತ್ತೇವೆ. ಅದೇ ರೀತಿ ಭೂಮಿ ತಾಯಿಗೆ ಮಡಿಲು ತುಂಬುವ ಹಬ್ಬ ಎಂದೇ ಸೀಗೆ ಹುಣ್ಣಿಮಯನ್ನು ಬಣ್ಣಿಸಬಹುದು. ಈ ವೇಳೆ ಭೂಮಿ ತಾಯಿಗೆ ವಿವಿಧ ಖಾದ್ಯಗಳನ್ನು ಅರ್ಪಿಸಿ ಉತ್ತಮ ಫಸಲಿಗೆ ಪ್ರಾರ್ಥಿಸಲಾಗುತ್ತದೆ, ಸೀಗೆ ಹುಣ್ಣಿಮೆ ರೈತರ ಪಾಲಿಗೆ ಸಂಭ್ರಮದ ಹಬ್ಬ ಎನ್ನುತ್ತಾರೆ ರೈತ ಮಹಿಳೆ ಪ್ರಜ್ಞಾ ಜಡಗಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…