ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು ಮನೆಗೆ ತುಂಬಿಸಿಕೊಳ್ಳುವ ಸೀಗೆ ಹುಣ್ಣಿಮೆ ಹಬ್ಬವನ್ನು ಬೆಳಗಾವಿಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ದಿನದಂದು ಹುರಿಯಕ್ಕಿ ಹೋಳಿಗೆ, ಕರಿ ಕಡುಬು, ಎಣ್ಣೆ ಹೋಳಿಗೆ, ಸುರಳಿ ಹೋಳಿಗೆ, ಶೇಂಗಾ ಹೋಳಿಗೆ ಹಾಗೂ ಜೋಳ ಮತ್ತು ಸಜ್ಜೆಯ ರೊಟ್ಟಿ ಜೊತೆ ಪುಂಡಿ, ಬದನೆಕಾಯಿ, ಮೆಣಸಿನಕಾಯಿ ಪಲ್ಲೆ ಸೇರಿದಂತೆ ವಿವಿಧ ಬಗೆಯ ಚಟ್ನಿಯನ್ನು ಮಿಶ್ರಣ ಮಾಡಿ ಜಮೀನಿನಲ್ಲಿ ಹಂಚಿ ತಿನ್ನುತ್ತಾರೆ. ತಾವು ಬೆಳೆದ ಬೆಳೆಗೆ ಪೂಜೆ ಸಲ್ಲಿಸಿ ಬಳಿಕ ಕುಟುಂಬಸ್ಥರೆಲ್ಲರೂ ಒಂದೆಡೆ ಸೇರಿ ಊಟ ಮಾಡಿ ಇಡೀ ದಿನ ಹೊಲದಲ್ಲಿ ಕಳೆಯುತ್ತಾರೆ.
ಹೇಗೆ ಗರ್ಭಿಣಿಯರಿಗೆ ಸೀಮಂತ ಮಾಡುತ್ತೇವೆ. ಅದೇ ರೀತಿ ಭೂಮಿ ತಾಯಿಗೆ ಮಡಿಲು ತುಂಬುವ ಹಬ್ಬ ಎಂದೇ ಸೀಗೆ ಹುಣ್ಣಿಮಯನ್ನು ಬಣ್ಣಿಸಬಹುದು. ಈ ವೇಳೆ ಭೂಮಿ ತಾಯಿಗೆ ವಿವಿಧ ಖಾದ್ಯಗಳನ್ನು ಅರ್ಪಿಸಿ ಉತ್ತಮ ಫಸಲಿಗೆ ಪ್ರಾರ್ಥಿಸಲಾಗುತ್ತದೆ, ಸೀಗೆ ಹುಣ್ಣಿಮೆ ರೈತರ ಪಾಲಿಗೆ ಸಂಭ್ರಮದ ಹಬ್ಬ ಎನ್ನುತ್ತಾರೆ ರೈತ ಮಹಿಳೆ ಪ್ರಜ್ಞಾ ಜಡಗಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…