ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು ಮನೆಗೆ ತುಂಬಿಸಿಕೊಳ್ಳುವ ಸೀಗೆ ಹುಣ್ಣಿಮೆ ಹಬ್ಬವನ್ನು ಬೆಳಗಾವಿಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ದಿನದಂದು ಹುರಿಯಕ್ಕಿ ಹೋಳಿಗೆ, ಕರಿ ಕಡುಬು, ಎಣ್ಣೆ ಹೋಳಿಗೆ, ಸುರಳಿ ಹೋಳಿಗೆ, ಶೇಂಗಾ ಹೋಳಿಗೆ ಹಾಗೂ ಜೋಳ ಮತ್ತು ಸಜ್ಜೆಯ ರೊಟ್ಟಿ ಜೊತೆ ಪುಂಡಿ, ಬದನೆಕಾಯಿ, ಮೆಣಸಿನಕಾಯಿ ಪಲ್ಲೆ ಸೇರಿದಂತೆ ವಿವಿಧ ಬಗೆಯ ಚಟ್ನಿಯನ್ನು ಮಿಶ್ರಣ ಮಾಡಿ ಜಮೀನಿನಲ್ಲಿ ಹಂಚಿ ತಿನ್ನುತ್ತಾರೆ. ತಾವು ಬೆಳೆದ ಬೆಳೆಗೆ ಪೂಜೆ ಸಲ್ಲಿಸಿ ಬಳಿಕ ಕುಟುಂಬಸ್ಥರೆಲ್ಲರೂ ಒಂದೆಡೆ ಸೇರಿ ಊಟ ಮಾಡಿ ಇಡೀ ದಿನ ಹೊಲದಲ್ಲಿ ಕಳೆಯುತ್ತಾರೆ.
ಹೇಗೆ ಗರ್ಭಿಣಿಯರಿಗೆ ಸೀಮಂತ ಮಾಡುತ್ತೇವೆ. ಅದೇ ರೀತಿ ಭೂಮಿ ತಾಯಿಗೆ ಮಡಿಲು ತುಂಬುವ ಹಬ್ಬ ಎಂದೇ ಸೀಗೆ ಹುಣ್ಣಿಮಯನ್ನು ಬಣ್ಣಿಸಬಹುದು. ಈ ವೇಳೆ ಭೂಮಿ ತಾಯಿಗೆ ವಿವಿಧ ಖಾದ್ಯಗಳನ್ನು ಅರ್ಪಿಸಿ ಉತ್ತಮ ಫಸಲಿಗೆ ಪ್ರಾರ್ಥಿಸಲಾಗುತ್ತದೆ, ಸೀಗೆ ಹುಣ್ಣಿಮೆ ರೈತರ ಪಾಲಿಗೆ ಸಂಭ್ರಮದ ಹಬ್ಬ ಎನ್ನುತ್ತಾರೆ ರೈತ ಮಹಿಳೆ ಪ್ರಜ್ಞಾ ಜಡಗಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…