Advertisement
MIRROR FOCUS

ಕಾಫಿಮಂಡಳಿ ನೂತನ ಅಧ್ಯಕ್ಷರಾಗಿ ಕಾಫಿ ಬೆಳೆಗಾರ ಎಂ.ಜೆ.ದಿನೇಶ್ ದೇವರುಂದ ಆಯ್ಕೆ | ಕಾಫಿ ಉದ್ದಿಮೆಗೆ, ಕಾಫಿ ಮಂಡಳಿಗೆ ನವಚೈತನ್ಯ ಸಿಗುವ ಭರವಸೆ |

Share

ಕಾಫಿಮಂಡಳಿ ನೂತನ ಅಧ್ಯಕ್ಷರಾಗಿ(President of Coffee Board)ಕೃಷಿಕ ಪತ್ರಿಕೆ ಪ್ರಕಾಶಕ, ಕಾಫಿ ಬೆಳೆಗಾರ ಎಂ.ಜೆ.ದಿನೇಶ್ ದೇವರುಂದ(M.J.Dinesh Devarunda)ಇವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹಲವು ಸಮಯದಿಂದ ಕಾಫಿ ಮಂಡಳಿ ಅಧ್ಯಕ್ಷ ಸ್ಥಾನ ತೆರವಾಗಿತ್ತು, ಇದೀಗ ಕೇಂದ್ರ ಸರ್ಕಾರದ(Central govt) ಅಧೀನದಲ್ಲಿ ಇರುವ ಪ್ರತಿಷ್ಠಿತ ಕಾಫಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕಾಫಿ ಬೆಳೆಗಾರರೊಬ್ಬರನ್ನು ನೇಮಕ ಮಾಡಲಾಗಿದೆ.

Advertisement
Advertisement

ಈ ಹಿಂದೆಯೆಲ್ಲ ಕಾಫಿ ಮಂಡಳಿ ಅಧ್ಯಕ್ಷ ಸ್ಥಾನ ಐ.ಎ.ಎಸ್. ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿತ್ತು. ಎನ್.ಡಿ.ಎ.ಅಧಿಕಾರಕ್ಕೆ ಬಂದ ಮೇಲೆ ಕಾಫಿ ಬೆಳೆಗಾರರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಪರಿಪಾಟ ಆರಂಭಿಸಲಾಗಿತ್ತು. ಹೊಸ ನಿಯಮ ಜಾರಿಗೆ ಬಂದ ನಂತರ ಒಂದು ಅವಧಿಗೆ ಚಿಕ್ಕಮಗಳೂರು ಜಿಲ್ಲೆಯ ಎಂ.ಎಸ್.ಬೋಜೇಗೌಡರು ಕಾಫಿ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರು ಕಳೆದ ವರ್ಷ ಹೆಜ್ಜೇನು ದಾಳಿಯಿಂದ ದುರ್ಮರಣ ಹೊಂದಿದ್ದರು. ಕಾಫಿ ಮಂಡಳಿ ನೂತನ ಸಾರಥಿಯಾಗಿರುವ ದಿನೇಶ್ ಅವರು ಮೂಡಿಗೆರೆ ತಾಲೂಕಿನ ದೇವರುಂದ ಗ್ರಾಮದವರು. ಮೂಲತಃ ಇವರದ್ದು ಮೇಕನಗದ್ದೆ ಗ್ರಾಮ.

Advertisement

ದಿನೇಶ್ ಮೇಕನಗದ್ದೆ ಗ್ರಾಮದ ಜಗನ್ನಾಥ ಗೌಡ, ಕಮಲಮ್ಮ ದಂಪತಿಗಳ ಪುತ್ರ, ಪತ್ನಿ ಚೈತ್ರಾ ಸಾಪ್ಟ್ ವೇರ್ ಇಂಜಿನಿಯರ್, ಮಗಳು ಓದು ಮುಗಿಸಿ ಉದ್ಯೋಗದಲ್ಲಿದ್ದು, ಮಗ ಡೆಹ್ರಾಡೂನ್ ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ. ದಿನೇಶ್ ಅವರು ಕಳೆದ 18 ವರ್ಷಗಳಿಂದ ಕೃಷಿಕ ಎಂಬ ಪತ್ರಿಕೆ ನಡೆಸುತ್ತಿದ್ದಾರೆ. ಜೊತೆಗೆ ಕಾಫಿ ಉದ್ದಿಮೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಳು ಮೆಣಸಿಗೆ ಸಂಬಂಧಿಸಿದಂತೆ ಬ್ಲಾಕ್ ಗೋಲ್ಡ್ ಲೀಗ್ ಸಂಸ್ಥೆಯ ಪ್ರವರ್ತಕರಲ್ಲಿ ಒಬ್ಬರಾಗಿದ್ದಾರೆ. ಚಿಕ್ಕಮಗಳೂರಿಗೆ ಸ್ಪೈಸ್ ಪಾರ್ಕ್ ತರುವುದರಲ್ಲಿ ಇವರ ಪ್ರಯತ್ನ ಪ್ರಮುಖವಾಗಿದೆ. ಕೃಷಿಕ ಆಪ್ ಮೂಲಕ ಕೃಷಿ ಮಾಹಿತಿಗಳನ್ನು ರೈತರಿಗೆ ತಲುಪಿಸುವ ಪ್ರಯತ್ನ ನಡೆಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದು ಮೂಡಿಗೆರೆ ಟಿಎಪಿಸಿಎಂಎಸ್, ಹಂತೂರು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ರೈತರಿಗೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯುವ ವಿಧಾನಗಳ ಬಗ್ಗೆ, ಕೃಷಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಕೆ ಬಗ್ಗೆ ಆನೇಕ ಕಾರ್ಯಾಗಾರಗಳನ್ನು, ತರಬೇತಿ ಶಿಬಿರಗಳನ್ನು, ಹಳ್ಳಿ ಹಬ್ಬದಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ತಮ್ಮದೇ ಆದ ಪ್ರಕಾಶನ ಸಂಸ್ಥೆಯಿಂದ ಕೃಷಿ ಸಂಬಂಧಿತ ಹಲವು ಕೃತಿಗಳನ್ನು ಪ್ರಕಟಿಸಿದ್ದಾರೆ. ರಾಜಕೀಯವಾಗಿ ಬಿ.ಜೆ.ಪಿ.ಯಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಬಿ.ಜೆ.ಪಿ. ರೈತ ಮೋರ್ಚ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. ಉತ್ತಮ ವಾಗ್ಮಿ ಮತ್ತು ಕೃಷಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಆಳವಾದ ಜ್ಞಾನ ಹೊಂದಿದ್ದಾರೆ.

Advertisement

ದಿನೇಶ್ ಅವರು ಇದೀಗ ಕಾಫಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾಫಿ ಉದ್ದಿಮೆಯ ಬಗ್ಗೆ ವಿಶೇಷ ಜ್ಞಾನವನ್ನು ಹೊಂದಿರುವ ಮತ್ತು ತಮ್ಮದೇ ಆದ ಕನಸು, ದೃಷ್ಟಿಕೋನ ಹೊಂದಿರುವ ದಿನೇಶ್ ಅವರಿಂದ ಕಾಫಿ ಉದ್ದಿಮೆಗೆ ಮತ್ತು ಕಾಫಿ ಮಂಡಳಿಗೆ ನವಚೈತನ್ಯ ಸಿಗುವ ಭರವಸೆ ಮತ್ತು ಹಾರೈಕೆ ಎಲ್ಲರದಾಗಿದೆ.

The central government has appointed M.J. Dinesh Devarunda, a coffee grower and publisher of agricultural magazine, as the new President of Coffee Board. The post of chairman of the coffee board was vacant for a long time, now a coffee grower has been appointed to the post of chairman of the prestigious coffee board under the central government.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

17 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

18 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

18 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

19 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

19 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

22 hours ago