ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

January 10, 2026
10:28 PM

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ ಚಿಂತೆಗೆ ಒಳಗಾಗಿರುವವರಿಗೆ ಇದೀಗ ಕರ್ನಾಟಕ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅದೇನೆಂದರೆ ʼಸ್ವಾವಲಂಬಿ ಸಾರಥಿʼ ಯೋಜನೆ. ಈ ಯೋಜನೆಯ ಮೂಲಕ ನಿಮ್ಮ ಕನಸನ್ನು ನನಸಾಗಿಸಬಹುದು.

ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಠ ಪಂಗಡದ (ST) ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾಗಿದೆ ಈ ಯೋಜನೆಯ ಅಡಿಯಲ್ಲಿ ನೀವು ಟ್ಯಾಕ್ಟರ್ ಅಥವಾ ಸಾರಿಗೆ ವಾಹನ ಖರೀದಿಸಿದರೆ, ಸರ್ಕಾರವೇ ನಿಮಗೆ ರೂ 4 ಲಕ್ಷದವರೆಗೆ ಸಹಾಯಧನ ನೀಡಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬಿಪಿಎಲ್ ರೇಷನ್ ಕಾರ್ಡ್
• ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್
• ಜಾತಿ ಮತ್ತು ಆದಾಯ ದೃಡೀಕರಣ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಭಾವಚಿತ್ರ
ಅರ್ಜಿ ಸಲ್ಲಿಸುವ ಸ್ಥಳ: ಕರ್ನಾಟಕದ ಸುವಿಧಾ ಪೋರ್ಟಲ್ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror