ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ ಚಿಂತೆಗೆ ಒಳಗಾಗಿರುವವರಿಗೆ ಇದೀಗ ಕರ್ನಾಟಕ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅದೇನೆಂದರೆ ʼಸ್ವಾವಲಂಬಿ ಸಾರಥಿʼ ಯೋಜನೆ. ಈ ಯೋಜನೆಯ ಮೂಲಕ ನಿಮ್ಮ ಕನಸನ್ನು ನನಸಾಗಿಸಬಹುದು.
ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಠ ಪಂಗಡದ (ST) ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾಗಿದೆ ಈ ಯೋಜನೆಯ ಅಡಿಯಲ್ಲಿ ನೀವು ಟ್ಯಾಕ್ಟರ್ ಅಥವಾ ಸಾರಿಗೆ ವಾಹನ ಖರೀದಿಸಿದರೆ, ಸರ್ಕಾರವೇ ನಿಮಗೆ ರೂ 4 ಲಕ್ಷದವರೆಗೆ ಸಹಾಯಧನ ನೀಡಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬಿಪಿಎಲ್ ರೇಷನ್ ಕಾರ್ಡ್
• ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್
• ಜಾತಿ ಮತ್ತು ಆದಾಯ ದೃಡೀಕರಣ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಭಾವಚಿತ್ರ
ಅರ್ಜಿ ಸಲ್ಲಿಸುವ ಸ್ಥಳ: ಕರ್ನಾಟಕದ ಸುವಿಧಾ ಪೋರ್ಟಲ್ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…