ಡಾ.ಎಚ್. ಜಿ ಶ್ರೀಧರ್ ಅವರ ಕೃತಿಗಳು ಹಾಗೂ ಅವರ ಜೀವನದ ಬಗೆಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಚಾರಗೋಷ್ಠಿ

January 14, 2023
9:26 PM

ಡಾ.ಎಚ್.ಜಿ ಶ್ರೀಧರ್ ಅವರು ಎಲೆ ಮರೆಯ ಕಾಯಿಯಂತೆ ಉಳಿದವರು. ಯಾವತ್ತಿಗೂ ತಮ್ಮ ಇರುವನ್ನು ಪ್ರದರ್ಶಿಸದೇ ನಾಟಕ, ಕಾದಂಬರಿ, ಸಂಶೋಧನೆ, ಸಂಘಟನೆ ಹೀಗೆ ಅನೇಕ ಕ್ಷೇತ್ರಗಳಲ್ಲಿ ಕೈ ಆಡಿಸಿ, ಸಮಾಜಕ್ಕೆ, ಸಾಹಿತ್ಯ ಕ್ಷೇತ್ರಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ರೀತಿಯಲ್ಲಿ ಕೊಡುಗೆ ನೀಡಿದ ಇವರು ನಮಗೊಂದು ಹೆಮ್ಮೆ ಮತ್ತು ಇಂದಿನ ಯುವ ಸಾಹಿತಿಗಳಿಗೆ ಆದರ್ಶ ಎಂದು ಪುತ್ತೂರು ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಐತಪ್ಪ ನಾಯ್ಕ್ ಹೇಳಿದರು.

Advertisement
Advertisement
Advertisement

ಇಲ್ಲಿನ ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯ (ಸ್ವಾಯತ್ತ)ದಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಡಾ.ಎಚ್ ಜಿ ಶ್ರೀಧರ ಇವರ ಬದುಕು- ಬರೆಹ ಕುರಿತ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.

Advertisement

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ .ಶ್ರೀಧರ್ ಹೆಚ್ ಜಿ ಮಾತನಾಡಿ, ಓರ್ವ ಗುರು ಉಳಿಯುವುದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮಾತ್ರ. ವಿದ್ಯಾರ್ಥಿಗಳ ಜೊತೆಗಿನ ಭಾವನಾ ಬೆಸುಗೆ ಅಗತ್ಯವಾದುದು. ಸಂಸ್ಥೆ ನನಗೆ ನೀಡಿರುವ ಪ್ರೀತಿ ಅಪಾರವಾದದ್ದು, ಇದಕ್ಕೆ ನಾನು ಸದಾ ಚಿರಋಣಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Advertisement

ಉದ್ಘಾಟನಾ ಕಾರ್ಯಕ್ರಮದ ನಂತರ ಸಾಹಿತಿ ಡಾ. ಡಾ.ಎಚ್. ಜಿ ಶ್ರೀಧರ್ ಅವರ ಕೃತಿಗಳು ಹಾಗೂ ಅವರ ಜೀವನದ ಬಗೆಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಚಾರಗೋಷ್ಠಿಗಳು ನಡೆಯಿತು.

ಕನ್ನಡ ಸಂಘದ ವತಿಯಿಂದ ನಡೆಸಲಾದ ರಸಪ್ರಶ್ನಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ದೀಪ, ಸೌಮ್ಯ ಆಶಯ ಗೀತೆ ಹಾಡಿದರು. ಪ್ರಾಂಶುಪಾಲ ಪ್ರೊ ವಿಷ್ಣುಗಣಪತಿ ಭಟ್ ಸ್ವಾಗತಿಸಿದರು.

Advertisement

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮನಮೋಹನ್ ಎಂ ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಗೀತಾಕುಮಾರಿ ಟಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ
ತೀರ್ಥಹಳ್ಳಿ ಮೊದಲ ಮಳೆ ವ್ಯಕ್ತಿ ಬಲಿ | ಶಿವಮೊಗ್ಗದಲ್ಲೂ ಗಾಳಿ ಮಳೆ |
April 19, 2024
10:02 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror