Advertisement
ಸುದ್ದಿಗಳು

ಡಾ.ಎಚ್. ಜಿ ಶ್ರೀಧರ್ ಅವರ ಕೃತಿಗಳು ಹಾಗೂ ಅವರ ಜೀವನದ ಬಗೆಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಚಾರಗೋಷ್ಠಿ

Share

ಡಾ.ಎಚ್.ಜಿ ಶ್ರೀಧರ್ ಅವರು ಎಲೆ ಮರೆಯ ಕಾಯಿಯಂತೆ ಉಳಿದವರು. ಯಾವತ್ತಿಗೂ ತಮ್ಮ ಇರುವನ್ನು ಪ್ರದರ್ಶಿಸದೇ ನಾಟಕ, ಕಾದಂಬರಿ, ಸಂಶೋಧನೆ, ಸಂಘಟನೆ ಹೀಗೆ ಅನೇಕ ಕ್ಷೇತ್ರಗಳಲ್ಲಿ ಕೈ ಆಡಿಸಿ, ಸಮಾಜಕ್ಕೆ, ಸಾಹಿತ್ಯ ಕ್ಷೇತ್ರಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ರೀತಿಯಲ್ಲಿ ಕೊಡುಗೆ ನೀಡಿದ ಇವರು ನಮಗೊಂದು ಹೆಮ್ಮೆ ಮತ್ತು ಇಂದಿನ ಯುವ ಸಾಹಿತಿಗಳಿಗೆ ಆದರ್ಶ ಎಂದು ಪುತ್ತೂರು ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಐತಪ್ಪ ನಾಯ್ಕ್ ಹೇಳಿದರು.

ಇಲ್ಲಿನ ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯ (ಸ್ವಾಯತ್ತ)ದಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಡಾ.ಎಚ್ ಜಿ ಶ್ರೀಧರ ಇವರ ಬದುಕು- ಬರೆಹ ಕುರಿತ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ .ಶ್ರೀಧರ್ ಹೆಚ್ ಜಿ ಮಾತನಾಡಿ, ಓರ್ವ ಗುರು ಉಳಿಯುವುದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮಾತ್ರ. ವಿದ್ಯಾರ್ಥಿಗಳ ಜೊತೆಗಿನ ಭಾವನಾ ಬೆಸುಗೆ ಅಗತ್ಯವಾದುದು. ಸಂಸ್ಥೆ ನನಗೆ ನೀಡಿರುವ ಪ್ರೀತಿ ಅಪಾರವಾದದ್ದು, ಇದಕ್ಕೆ ನಾನು ಸದಾ ಚಿರಋಣಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ಸಾಹಿತಿ ಡಾ. ಡಾ.ಎಚ್. ಜಿ ಶ್ರೀಧರ್ ಅವರ ಕೃತಿಗಳು ಹಾಗೂ ಅವರ ಜೀವನದ ಬಗೆಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಚಾರಗೋಷ್ಠಿಗಳು ನಡೆಯಿತು.

ಕನ್ನಡ ಸಂಘದ ವತಿಯಿಂದ ನಡೆಸಲಾದ ರಸಪ್ರಶ್ನಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ದೀಪ, ಸೌಮ್ಯ ಆಶಯ ಗೀತೆ ಹಾಡಿದರು. ಪ್ರಾಂಶುಪಾಲ ಪ್ರೊ ವಿಷ್ಣುಗಣಪತಿ ಭಟ್ ಸ್ವಾಗತಿಸಿದರು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮನಮೋಹನ್ ಎಂ ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಗೀತಾಕುಮಾರಿ ಟಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

9 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

16 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

16 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

17 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago