Advertisement
ಸುದ್ದಿಗಳು

ಡಾ.ಎಚ್. ಜಿ ಶ್ರೀಧರ್ ಅವರ ಕೃತಿಗಳು ಹಾಗೂ ಅವರ ಜೀವನದ ಬಗೆಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಚಾರಗೋಷ್ಠಿ

Share

ಡಾ.ಎಚ್.ಜಿ ಶ್ರೀಧರ್ ಅವರು ಎಲೆ ಮರೆಯ ಕಾಯಿಯಂತೆ ಉಳಿದವರು. ಯಾವತ್ತಿಗೂ ತಮ್ಮ ಇರುವನ್ನು ಪ್ರದರ್ಶಿಸದೇ ನಾಟಕ, ಕಾದಂಬರಿ, ಸಂಶೋಧನೆ, ಸಂಘಟನೆ ಹೀಗೆ ಅನೇಕ ಕ್ಷೇತ್ರಗಳಲ್ಲಿ ಕೈ ಆಡಿಸಿ, ಸಮಾಜಕ್ಕೆ, ಸಾಹಿತ್ಯ ಕ್ಷೇತ್ರಕ್ಕೆ, ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ರೀತಿಯಲ್ಲಿ ಕೊಡುಗೆ ನೀಡಿದ ಇವರು ನಮಗೊಂದು ಹೆಮ್ಮೆ ಮತ್ತು ಇಂದಿನ ಯುವ ಸಾಹಿತಿಗಳಿಗೆ ಆದರ್ಶ ಎಂದು ಪುತ್ತೂರು ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಐತಪ್ಪ ನಾಯ್ಕ್ ಹೇಳಿದರು.

ಇಲ್ಲಿನ ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯ (ಸ್ವಾಯತ್ತ)ದಲ್ಲಿ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಡಾ.ಎಚ್ ಜಿ ಶ್ರೀಧರ ಇವರ ಬದುಕು- ಬರೆಹ ಕುರಿತ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ .ಶ್ರೀಧರ್ ಹೆಚ್ ಜಿ ಮಾತನಾಡಿ, ಓರ್ವ ಗುರು ಉಳಿಯುವುದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮಾತ್ರ. ವಿದ್ಯಾರ್ಥಿಗಳ ಜೊತೆಗಿನ ಭಾವನಾ ಬೆಸುಗೆ ಅಗತ್ಯವಾದುದು. ಸಂಸ್ಥೆ ನನಗೆ ನೀಡಿರುವ ಪ್ರೀತಿ ಅಪಾರವಾದದ್ದು, ಇದಕ್ಕೆ ನಾನು ಸದಾ ಚಿರಋಣಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ಸಾಹಿತಿ ಡಾ. ಡಾ.ಎಚ್. ಜಿ ಶ್ರೀಧರ್ ಅವರ ಕೃತಿಗಳು ಹಾಗೂ ಅವರ ಜೀವನದ ಬಗೆಗೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಚಾರಗೋಷ್ಠಿಗಳು ನಡೆಯಿತು.

ಕನ್ನಡ ಸಂಘದ ವತಿಯಿಂದ ನಡೆಸಲಾದ ರಸಪ್ರಶ್ನಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ದೀಪ, ಸೌಮ್ಯ ಆಶಯ ಗೀತೆ ಹಾಡಿದರು. ಪ್ರಾಂಶುಪಾಲ ಪ್ರೊ ವಿಷ್ಣುಗಣಪತಿ ಭಟ್ ಸ್ವಾಗತಿಸಿದರು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮನಮೋಹನ್ ಎಂ ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಗೀತಾಕುಮಾರಿ ಟಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

41 minutes ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

1 hour ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

2 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

8 hours ago

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ

ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…

17 hours ago

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ

ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…

17 hours ago