IAS ಸಿಂಧೂರಿ-IPS ರೂಪಾ ಕಚ್ಚಾಟ ಪ್ರಕರಣದಲ್ಲಿ ಸರ್ಕಾರ ಜಡೆ ಜಗಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಸಿಂಧೂರಿ, ಡಿ.ರೂಪಾ ಹಾಗೂ ರೂಪ ಪತಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಮಾಡಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ ರೂಪಾ ಅವರನ್ನು ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿದೆ. ರೂಪ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ವಿಷಯ ಪ್ರಸ್ತಾಪಿಸಿ, ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದರು. ರಾಜ್ಯ ಸರ್ಕಾರ ಖಡಕ್ ಕ್ರಮಕ್ಕೆ ಮುಂದಾಗಿದೆ. ಸಿಂಧೂರಿ, ಡಿ.ರೂಪಾ ಕಡ್ಡಾಯ ರಜೆ ಮೇಲೆ ಕಳಿಸೋ ಸಾಧ್ಯತೆಯಿದೆ. ಸಿಎಂ ಬೊಮ್ಮಾಯಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ ಬೆನ್ನಲ್ಲೇ ಸ್ಥಳ ತೋರಿಸದೇ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆಲ ದಿನಗಳ ಕಾಲ ಕಡ್ಡಾಯ ರಜೆ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ.
ಸಿಎಂ ಬೊಮ್ಮಾಯಿ CS ವಂದಿತಾ ಶರ್ಮಾ ಎದುರೇ ಗರಂ ಆಗಿದ್ದಾರೆ. ಅಧಿಕಾರಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗ್ತಿದೆ, ಸರ್ಕಾರದ ಮಾನ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಿ ಎಂದು CSಗೆ ಸಿಎಂ ಖಡಕ್ ಸೂಚನೆ ನೀಡಿದ್ದರು. ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಲು ಸಲಹೆ ನೀಡಿದ್ದರು.
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…