ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

June 14, 2025
9:44 PM

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಪೂರಕ ಮಾಹಿತಿಯನ್ನು ಸಂಗ್ರಹಿಸಿ, ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು.  ಈಗಾಗಲೇ ಪಡೆದುಕೊಳ್ಳಲಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ರಾಜ್ಯದಲ್ಲಿ ಕ್ಯಾನ್ಸರ್‌ಖಾಯಿಲೆಯಿಂದ ಬಾಧಿತರಾಗಿರುವ ಸುಮಾರು 3500 ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ
May 27, 2026
2:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ
May 27, 2026
12:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?
May 27, 2026
11:51 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror