ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಪೂರಕ ಮಾಹಿತಿಯನ್ನು ಸಂಗ್ರಹಿಸಿ, ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಈಗಾಗಲೇ ಪಡೆದುಕೊಳ್ಳಲಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ರಾಜ್ಯದಲ್ಲಿ ಕ್ಯಾನ್ಸರ್ಖಾಯಿಲೆಯಿಂದ ಬಾಧಿತರಾಗಿರುವ ಸುಮಾರು 3500 ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…