ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಪೂರಕ ಮಾಹಿತಿಯನ್ನು ಸಂಗ್ರಹಿಸಿ, ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಈಗಾಗಲೇ ಪಡೆದುಕೊಳ್ಳಲಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ರಾಜ್ಯದಲ್ಲಿ ಕ್ಯಾನ್ಸರ್ಖಾಯಿಲೆಯಿಂದ ಬಾಧಿತರಾಗಿರುವ ಸುಮಾರು 3500 ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…