ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |

May 25, 2024
10:37 PM

ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಣೆ ನಡೆಯುತ್ತಿದ್ದರೂ ಸರ್ಕಾರದ ನಿಷ್ಕ್ರಿಯತೆ ಕುರಿತು ಹೈಕೋರ್ಟ್‌ ಪ್ರಶ್ನಿಸಿದೆ. 2021 ರಲ್ಲಿ ದಾಖಲಾದ ಎಫ್‌ಐಆರ್‌ನ ಮೇಲೆ ಏಕೆ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿದೆ. ಸುದೀರ್ಘ ಸಮಯದ ಬಳಿಕವೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಗೌಹಾಟಿ ಹೈಕೋರ್ಟ್‌ನ ನ್ಯಾಯ ಪೀಠವು ಕೇಳಿದೆ. 

ಅಡಿಕೆ ಸಾಗಾಟದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ  ಮಿಜೋರಾಂ ಸಾಮಾಜಿಕ ಕಾರ್ಯಕರ್ತ ವನ್ರಾಮ್‌ ಚುವಾಂಗಿ ಅವರು ಸಲ್ಲಿಸಿದ್ದರು. ಮಿಜೋರಾಂನಿಂದ ಇತರ ಪ್ರದೇಶಗಳಿಗೆ  ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವುದು ಕಂಡುಬರುತ್ತಿದೆ. ಈ ಅಕ್ರಮ ಸಾಗಾಟ ತಡೆಯುವ ಬಗ್ಗೆ ಮನವಿ ಮಾಡಲಾಗಿದ್ದರೂ ನಿರಂತರ ಸಾಗಾಟವಾಗುತ್ತಿತ್ತು.  ಈ ಸಮಸ್ಯೆ ಎತ್ತಿ ತೋರಿಸಿದೆ ಮತ್ತು ಈ ಅಕ್ರಮ ವ್ಯಾಪಾರವನ್ನು ಪರಿಹರಿಸುವಲ್ಲಿ ರಾಜ್ಯದ ನಿಷ್ಕ್ರಿಯತೆಯನ್ನು ಆರೋಪಿಸಿದೆ. ಸಂಬಂಧಪಟ್ಟ ಇಲಾಖೆಯು ನಕಲಿ ಇ-ವೇ ಬಿಲ್‌ಗಳನ್ನು ನೀಡಿ ಕಳ್ಳಸಾಗಣೆ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.ಜನವರಿ 22, 2024 ರಂದು ನ್ಯಾಯಾಲಯದ ಆದೇಶದಲ್ಲಿ, ಸಂಬಂಧಪಟ್ಟ ಇಲಾಖೆಗಳ ಇ-ವೇ ಬಿಲ್‌ಗಳ ವಿತರಣೆಯಲ್ಲಿನ ಅಕ್ರಮಗಳ  ಬಗ್ಗೆ ಹೈಕೋರ್ಟ್ ಈಗಾಗಲೇ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

ಮೂರು ವರ್ಷಗಳಿಂದ ಸಮಸ್ಯೆ ಬಗೆಹರಿಯದೆ ಕಾಲಹರಣ ಮಾಡಿದ್ದರೂ 2024ರ ಜನವರಿ 22ರಿಂದ ನ್ಯಾಯಾಲಯದ ಆದೇಶವನ್ನು ಏಕೆ ಸಂಪೂರ್ಣವಾಗಿ ಪಾಲಿಸಿಲ್ಲ ಎಂಬುದನ್ನು ವಿವರಿಸಿ ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಮಿಜೋರಾಂನ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. 2021 ರಲ್ಲಿ ಅರ್ಜಿದಾರರು ಸಲ್ಲಿಸಿದ ಎಫ್‌ಐಆರ್ ಅನ್ನು ದಾಖಲಿಸಲು ವಿಫಲವಾದ ಬಗ್ಗೆ ವಿವರಿಸುವ ವೈಯಕ್ತಿಕ ಅಫಿಡವಿಟ್ ಅನ್ನು ಸಲ್ಲಿಸಲು ಚಂಫೈ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಗೆ ಆದೇಶಿಸಲಾಗಿದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror